ಅನವಶ್ಯಕ ಯಾರಿಗೂ ತೊಂದರೆ ಕೊಡಬೇಡಿ: ಪೊಲೀಸರಿಗೆ ಸೂಚಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ, ಏ. 6, ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದಿನಿಂದ ಏ. 11ರವರೆಗೆ ಲಾಕ್ಡೌನ್ ನಿಂದ ರೈತರ ಹಾಗೂ ಕೃಷಿ ಸ್ಥಿತಿಗತಿ ಅವಲೋಕನಕ್ಕೆ ಖುದ್ದು ಪರಿಶೀಲನೆಗೆ ಮುಂದಾಗಿದ್ದಾರೆ. ಇಂದು ಮೊದಲ ದಿನದ ಪ್ರವಾಸದಲ್ಲಿ ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಮತಕ್ಷೇತ್ರ ಹಿರೇಕೆರೂರು ನಿವಾಸದಿಂದ ಶಿಗ್ಗಾಂ ಮಾರ್ಗವಾಗಿ ಇಂದು ಬೆಳಿಗ್ಗೆನೆ ಸಚಿವರು ಪ್ರವಾಸ ಕೈಗೊಂಡಿದ್ದು, ಮಾರ್ಗಮಧ್ಯೆ ಕಂಡುಬಂದ ಸಮಸ್ಯೆಗಳತ್ತವೂ ಸಚಿವರು ಗಮನ ಹರಿಸಿದರು. ಈ ವೇಳೆ ಕೆಲವೆಡೆ ಪೊಲೀಸರಿಂದ ಅನವಶ್ಯಕ ತೊಂದರೆ ಕಿರಿಕಿರಿಯುಂಟಾಗುತ್ತಿದೆ ಎಂಬುದನ್ನು ಪರಿಶೀಲಿಸಲು ಸಚಿವರು ಮುಂದಾದರು.ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲೂಕಿ ತಡಸ ಚೆಕ್ ಪೊಸ್ಟ್ ಬಳಿ ಪೊಲೀಸರು ಅನವಶ್ಯಕವಾಗಿ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದ್ದಾರೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಬಿ.ಸಿ.ಪಾಟೀಲ್ ಸ್ವತಃ ಚೆಕ್ ಪೊಸ್ಟ್ ಗೆ ಭೇಟಿ ನೀಡಿ, ಅನವಶ್ಯಕ ಯಾರಿಗೂ ಯಾವುದೇ ವಾಹನಕ್ಕೂ ತೊಂದರೆಯುಂಟು ಮಾಡಬೇಡಿ ಎಂದು ಪೊಲೀಸರಿಗೆ ಸೂಚಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 