ಸಮಾನತೆ ಸಿಗುವವರೆಗೂ ಹೋರಾಟ ನಿಲ್ಲದಿರಲಿ
ಬೆಂಗಳೂರು 4: ಅಂಬೇಡ್ಕರ್ ಅವರ ಆಶಯದಂತೆ ಸಮಾನತೆ ಸಿಗುವ ವರೆಗೂ ದಲಿತ ಸಮುದಾಯ ಸದಾ ಹೋರಾಟ ನಡೆಸುತ್ತಿರಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಸಮತಾ ಸೈನಿಕ ದಳ ಆಯೋಜಿಸಿದ್ದ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಾಚರಣೆ ಹಾಗೂ ಡಾ.ಎಂ.ವೆಂಕಟಸ್ವಾಮಿ ಅವರ ಅಭಿನಂದನಾ ಗ್ರಂಥ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಎಲ್ಲರೂ ಸಮಾನತೆಯಿಂದ ಬದುಕಬೇಕೆಂಬ ಉದ್ದೇಶದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಶಿಕ್ಷಣ ಕ್ಷೇತ್ರದಲ್ಲಿ ದಲಿತ ಮಕ್ಕಳಿಗೆ ಓದಲು ಅವಕಾಶ ಕಲ್ಪಿಸಿಕೊಟ್ಟಿದ್ದು, ದಲಿತ ಸಮುದಾಯಕ್ಕೆ ಅವರ ಕೊಡುಗೆ ಗಣನೀಯ ಎಂದು ತಿಳಿಸಿದರು. ಡಾ.ಬಿ.ಆರ್. ಅಂಬೇಡ್ಕರ್ ಅವರ ಕನಸು ಎಲ್ಲರಿಗೂ ಸಮಾನತೆ ದೊರೆಯಬೇಕು ಎಂಬುದಾಗಿತ್ತು. ಎಲ್ಲಿಯವರೆಗೆ ಸಮಾನತೆ ದೊರೆಯುವುದಿಲ್ಲವೋ ಅಲ್ಲಿವರೆಗೂ ಈ ಸಮುದಾಯ ಹೋರಾಟ ಮುಂದುವರೆಯಬೇಕು ಎಂದರು. ದಲಿತ ಸಮುದಾಯದ ವತಿಯಿಂದ ಈ ವರ್ಷ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಸ್ವಾಗತಾರ್ಹ ಎಂದರು.
ದಲಿತ ಹೋರಾಟಗಾರ ಡಾ.ಎಂ.ವೆಂಕಟಸ್ವಾಮಿ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ, ಶಿಕ್ಷಣ, ಕೃಷಿ ಕ್ಷೇತ್ರಗಳಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹೀಗಾಗಿ, ಅವರ ಜಯಂತಿ ದಿನದಂದು, ಸಕರ್ಾರಿ ರಜೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 