ತಪ್ಪದೇ ರೋಟಾ ವೈರಸ್ ಲಸಿಕೆ ಹಾಕಿಸಿ: ಕುಕನೂರ
ಧಾರವಾಡ 29: ಆರು, ಹತ್ತು ಮತ್ತು ಹದಿನಾಲ್ಕು ವಾರದೊಳಗಿನ ಪ್ರತಿ ಮಗುವಿಗೆ ಉಳಿದ ಲಸಿಕೆಗಳ ಜೊತೆಗೆ ತಪ್ಪದೇ ರೋಟಾ ವೈರಸ್ ಲಸಿಕೆಯನ್ನು ಹಾಕಿಸಬೇಕೆಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಗಿರಿಧರ ಕುಕನೂರ ಹೇಳಿದರು.
ಅವರು ಇಂದು ಮಧ್ಯಾಹ್ನ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಡಿ ಆರಂಭಿಸಿರುವ ರೋಟಾ ವೈರಸ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳಿಗೆ ಬರುವ ವಿವಿಧ ರೀತಿಯ ಭೇದಿಗಳಲ್ಲಿ ಶೇ. 40 ರಷ್ಟು ಭೇದಿಗಳು ರೋಟಾ ವೈರಸ್ನಿಂದ ಉಂಟಾಗುತ್ತದೆ. ಆದ್ದರಿಂದ ತಾಯಂದಿರು ಮಗುವಿಗೆ ನಿಯಮಾನುಸಾರ ಹಾಕುವ ವಿವಿಧ ರೀತಿಯ ಲಸಿಕೆಗಳೊಂದಿಗೆ ತಪ್ಪದೇ ರೋಟಾ ವೈರಸ್ ಲಸಿಕೆಯನ್ನು ಮೂರುಸಲ ಹಾಕಿಸಬೇಕು. ಪಾಲಕರು ಅಥವಾ ತಾಯಂದಿರು ತಮ್ಮ ಮಕ್ಕಳನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಲಸಿಕೆ ಹಾಕಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಡಾ:ಟಿ.ಎ. ಶೇಪೂರ, ಡಾ: ಕೆ.ವಿ. ಅಚ್ಯುತ್, ಡಾ: ಎಸ್.ಟಿ. ಸ್ವಾಮಿ, ಡಾ:ಸಿ.ಬಿ. ನಾಡಗೌಡ ಸೇರಿದಂತೆ ವಿವಿಧ ಶಿಶುವೈದ್ಯರು, ಸ್ನಾತಕೋತ್ತರ ವೈದ್ಯ ವಿದ್ಯಾಥರ್ಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 