ವೈದ್ಯರ ದಿನಾಚರಣೆ: ಡಾ. ಮಾಕಣ್ಣವರಗೆ ಸನ್ಮಾನ

ಹುಬ್ಬಳ್ಳಿ 03: ವೈದ್ಯರ ದಿನಾಚರಣೆ ಅಂಗವಾಗಿ ಕಿಮ್ಸ್‌ನ ತಜ್ಞ ವೈದ್ಯ ಡಾ. ವಿನೋದ ಜೆ. ಮಾಕಣ್ಣವರ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶಾಲು, ಗ್ರಂಥ ನೀಡಿ ಮಾಲಾರೆ​‍್ಣ ಮಾಡಿ, ಗೌರವದಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.  

ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಚುಟುಕು ಸಾಹಿತ್ಯ ಪರಿಷತ್ತಿನ ಚನ್ನಬಸಪ್ಪ ಧಾರವಾಡಶೆಟ್ಟರ, ನಿವೃತ್ ಶಿಕ್ಷಕ ಎಸ್‌.ಐ.ನೇಕಾರ, ಶಿವರುದ್ರ ಟ್ರಸ್ಟನ ನಿರ್ದೇಶಕ ಡಾ. ಬಸವಕುಮಾರ ತಲವಾಯಿ, ಮುಂತಾದವರು ಇದ್ದರು.