ಕಾಳಿದಾಸ ಶಿಕ್ಷಣ ಸಮಿತಿಯಿಂದ ವೈದ್ಯರ ದಿನಾಚರಣೆ

ಕಾಳಿದಾಸ ಶಿಕ್ಷಣ ಸಮಿತಿಯಿಂದ ವೈದ್ಯರ ದಿನಾಚರಣೆ Doctors' Day celebrated by Kalidasa Education Committee

ಗದಗ  01:  ನಗರದ ಕಳಸಾಪುರ ರಸ್ತೆಯಲ್ಲಿರುವ ಶ್ರೀ ಕಾಳಿದಾಸ ಶಿಕ್ಷಣ ಸಮಿತಿಯ ಶ್ರೀ ಕಾಳಿದಾಸ ಪೂರ್ವ ಪ್ರಾಥಮಿಕ ಮತ್ತು ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ನಗರದ ಚಿರಾಯು ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಈ ಕಾರ್ಯಕ್ರಮದಲ್ಲಿ ಡಾ. ಗುರುಪ್ರಸಾದ ಎನ್‌. ಆರೋಗ್ಯವು ಮಕ್ಕಳಿಗೆ ವರದಾನ ಎಂದು ಹೇಳಿದರು ಮತ್ತು ಮಕ್ಕಳಿಗೆ ಆರೋಗ್ಯದ ಬಗ್ಗೆ ಕೆಲವು ಸಲಹೆಗಳನ್ನು ನೀಡಿದರು. ಭವಿಷ್ಯದಲ್ಲಿ ಎಲ್ಲಾ ಮಕ್ಕಳು ಉತ್ತಮ ವೈದ್ಯರಾಗಲಿ ಎಂದು ಅವರು ಹಾರೈಸಿದರು. ಆಸ್ಪತ್ರೆಯ ಸಿಬ್ಬಂದಿ, ಶ್ರೀ ಕಾಳಿದಾಸ ಪೂರ್ವ ಪ್ರಾಥಮಿಕ ಮತ್ತು ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.