ವೈದ್ಯರನ್ನು ದೇವರು ಮನುಕುಲಕ್ಕೆ ವರದಾನವಾಗಿ ನೀಡಿದ್ದಾನೆ: ಪಾಟೀಲ
Doctors are a blessing from God to mankind: Patil
ವಿಜಯಪುರ 26: ಕಾಯಿಲೆಗಳನ್ನು ಗುಣಪಡಿಸಿ ನೋವುಗಳಿಂದ ಮುಕ್ತರನ್ನಾಗಿ ಮಾಡುವ ವೈದ್ಯರನ್ನು ದೇವರು ಮನುಕುಲಕ್ಕೆ ವರದಾನವಾಗಿ ನೀಡಿದ್ದಾನೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಗುರುವಾರ ಮುಸ್ಸಂಜೆ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ ಆಯೋಜಿಸಿದ್ದ ಹಿರಿಯ ಪ್ರಾಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ದೇವರು ಮಾನವನಿಗೆ ಆರೋಗ್ಯವೆಂಬ ಅಮೂಲ್ಯ ಸಂಪತ್ತನ್ನು ನೀಡಿದ್ದಾನೆ.
ಈ ಸಂಪತ್ತನ್ನು ಬಾಧಿಸುವ ರೋಗಗಳನ್ನು ಗುಣಪಡಿಸಲು ವೈದ್ಯರ ರೂಪದಲ್ಲಿ ವರವನ್ನೂ ಕೊಟ್ಟಿದ್ದಾನೆ. ಕೊರೊನಾ ಸಂಕಷ್ಟ ಸಂದರ್ಭದಲ್ಲಂತೂ ವೈದ್ಯರು ತಮ್ಮ ಕುಟುಂಬಗಳನ್ನೂ ಲೆಕ್ಕಿಸದೇ ರೋಗಿಗಳಿಗೆ ನೀಡಿರುವ ಸೇವೆ ಸದಾ ಸ್ಮರಣೀಯವಾಗಿದೆ ಎಂದು ಅವರು ಹೇಳಿದರು.ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ ಇಂದು ಹೆಮ್ಮರವಾಗಿ ಬೆಳೆಯಲು ಸಂಸ್ಥೆಯನ್ನು ಕಟ್ಟಿ ಬೆಳೆಸಿದ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ, ಬಂಥನಾಳ ಶ್ರೀಗಳು, ಶ್ರೀಮತಿ ಬಂಗಾರಮ್ಮ ಸಜ್ಜನ, ಬಿ. ಎಂ. ಪಾಟೀಲ ಹಾಗೂ ಇಂದಿನ ಅಧ್ಯಕ್ಷ ಎಂ. ಬಿ.ಪಾಟೀಲ ಅವರು ವಾರ್ಗದರ್ಶನ ಮತ್ತು ಹಿಂದಿನ ಹಾಗೂ ಇಂದಿನ ವೈದ್ಯರ ಸೇವೆ ಪ್ರಮುಖ ಕಾರಣವಾಗಿದೆ. ಇಲ್ಲಿನ ವೈದ್ಯರ ಸಮರೆ್ಣ ಭಾವನೆಯಿಂದಾಗಿ ಬಸವನಾಡಿನ ಆರೋಗ್ಯ ಸೇವೆಗಳಿಗಾಗಿ ನೆರೆಯ ಮಹಾರಾಷ್ಟ್ರಕ್ಕೆ ಅಲೆದಾಡುವುದು ತಪ್ಪಿದೆ. ವಿಜಯಪುರ ಈಗ ಆರೋಗ್ಯ ಸೇವೆಗಳ ಹಬ್ ಆಗಿದೆ.
ಮಹಿಳೆಯರಿಗೆ ಉಚಿತ ಹೆರಿಗೆ, ತಾಯಿ ಎದೆಹಾಲು ಬ್ಯಾಂಕ್, ಸರಕಾರಿ ಆರೋಗ್ಯ ವಿಮೆ ಸೇವೆಗಳಿಂದಾಗಿ ಈ ಬಾರಿ ಎಂ.ಬಿ.ಬಿ.ಎಸ್ ಕೋರ್ಸಿಗೆ 50 ಹೆಚ್ಚುವರಿಯಾಗಿ ಸೀಟುಗಳು ಲಭ್ಯವಾಗಿವೆ. ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಡೀಮ್ಡ್ ವಿವಿ ದೇಶದ ಟಾಪ್ 10 ಸಂಸ್ಥೆಗಳಲ್ಲಿ ಒಂದು ಎಂದು ಸ್ಥಾನ ಪಡೆದಿವೆ. ಇದು ಎಲ್ಲರಿಗೂ ಹೆಮ್ಮೆಯ ವಿಷಯ ಎಂದು ಅವರು ಹೇಳಿದರು. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಮಾತನಾಡಿ, ಬಿ.ಎಲ್.ಡಿ.ಇ ಸಂಸ್ಥೆಯ ವ್ಯಾಪ್ತಿ ಈಗ ದೇಶಕ್ಕೆ ವಿಸ್ತರಿಸಿದೆ. ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಡೀಮ್ಡ್ ವಿವಿ ಕುಲಾಧಿಪತಿ ಬಿ. ಎಂ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಅವರ ದೂರದೃಷ್ಠಿಯ ಫಲವಾಗಿ ಉತ್ತರೋತ್ತರವಾಗಿ ಅಭಿವೃದ್ಧಿಯಾಗುತ್ತಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಹಿರಿಯ ವೈದ್ಯರು ಮತ್ತು ಪ್ರಾಧ್ಯಾಪಕರಾದ ಡಾ. ಆರ್. ಸಿ. ಬಿದರಿ, ಡಾ. ತೇಜಶ್ವಿನಿ ವಲ್ಲಭ, ಡಾ. ಎಸ್. ಎಸ್. ದೇವರಮನಿ, ಡಾ. ವಿಜಯಕುಮರಾ ಟಿ. ಕಲ್ಯಾಣಪ್ಪಗೋಳ, ಡಾ. ಶೈಲಜಾ ಬಿದರಿ, ಡಾ. ಎಸ್. ಎನ್. ಬೆಂತೂರ, ಡಾ. ಎಸ್. ಆರ್. ಮುದನೂರ, ಡಾ. ಎಂ. ಎಸ್. ಮೂಲಿಮನಿ, ಡಾ. ಕುಸಾಲ ಕೆ. ದಾಸ, ಡಾ. ವಲ್ಲಭ, ಡಾ. ಎಸ್. ಪಿ. ಚೌಕಿಮಠ, ಡಾ. ಅಶೋಕ ನಾಯಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಕಾನೂನು ಕಾಲೇಜಿನ ಪ್ರಾಚಾರ್ಯ ರಘುವೀರ ಕುಲಕರ್ಣಿ ಸೇರಿದಂತೆ ನಾನಾ ಕಾಲೇಜುಗಳ ಪ್ರಾಚಾರ್ಯರು, ನಾನಾ ವಿಭಾಗಗಳ ಮುಖ್ಯಸ್ಥರು, ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.ಡೀಮ್ಡ್ ವಿವಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಸ್ವಾಗತಿಸಿದರು.
ಡಾ. ಉದಯಕುಮಾರ ಸಿ, ನುಚ್ಚಿ ಪರಿಚಯಿಸಿದರು. ಡಾ. ತನುಜಾ ಪಠನಕರ, ಡಾ. ಲತಾ ಮುಲ್ಲೂರ, ಡಾ. ಚಂದ್ರಿಕಾ ದೂಡಿಹಾಳ, ಡಾ. ಶ್ರೀಲಕ್ಷ್ಮಿ ಬಗಲಿ, ಡಾ. ಅಶ್ವಿನಿ ನುಚ್ಚಿ ನಿರೂಪಿಸಿದರು. ಡಾ. ಗೀರೀಶ ಕುಲ್ಲೊಳ್ಳಿ ವಂದಿಸಿದರು. : ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ ಆಯೋಜಿಸಿದ್ದ ಹಿರಿಯ ಪ್ರಾಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮಾತನಾಡಿದರು. ಈ ಸಂದರ್ಭದಲ್ಲಿ ಡೀಮ್ಡ್ ವಿವಿಯ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಅರುಣ ಚಂ. ಇನಾಮದಾರ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 