ವೈದ್ಯರು ಭೂಮಿಯ ಮೇಲಿನ ನಡೆದಾಡುವ ದೇವರು ಇದ್ದಂತೆ
ಲೋಕದರ್ಶನ ವರದಿ
ಮೂಡಲಗಿ ಜು. 2: 'ವೈದ್ಯರು ಭೂಮಿಯ ಮೇಲಿನ ನಡೆದಾಡುವ ದೇವರು ಇದ್ದಂತೆ. ಅವರ ಸೇವೆಯು ಅನುಪಮವಾದದ್ದು' ಎಂದು ಡಾ. ಸಿದ್ದಲಿಂಗಯ್ಯ ಕಲಾ ಮತ್ತು ಸಾಂಸ್ಕೃತಿಕ ಸಮಾಜ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಮತ್ತು ಮಂಜುಳಾ ಹಿರೇಮಠ ಹೇಳಿದರು.
ತಾಲ್ಲೂಕಿನ ಕಲ್ಲೋಳಿಯ ಡಾ. ಸಿದ್ದಲಿಂಗಯ್ಯ ಕಲಾ ಮತ್ತು ಸಾಂಸ್ಕೃತಿಕ ಸಮಾಜ ಸೇವಾ ಪ್ರತಿಷ್ಠಾನದಲ್ಲಿ ಬುಧವಾರ ಆಚರಿಸಿದ ವೈದ್ಯರ ದಿನಾಚರಣೆಯಲ್ಲಿ ಪಟ್ಟಣದ ಎಲ್ಲ ವೈದ್ಯರನ್ನು ಸನ್ಮಾನಿಸಿ ಮಾತನಾಡಿದ ಅವರು ಕೊರೊನಾ ಅತಂಕದಲ್ಲಿ ವೈದ್ಯರ ಮತ್ತು ಆರೋಗ್ಯ ಕಾರ್ಯಕರ್ತರ ಪಾತ್ರ ಪ್ರಮುಖವಾಗಿದೆ ಎಂದರು.
ವೈದ್ಯರ ಪರವಾಗಿ ಡಾ. ಅಶೋಕ ಪಾಟೀಲ, ಡಾ. ಮಹಾದೇವ ಹೆಬ್ಬಾಳ ಮಾತನಾಡಿ ಸಮಾಜವು ವೈದ್ಯರ ಕಾರ್ಯವನ್ನು ಗುರುತಿಸುತ್ತಿರುವುದು ಹೆಮ್ಮೆಯೆನಿಸುತ್ತದೆ ಎಂದರು.
ಡಾ. ಅಶೋಕ ಪಾಟೀಲ, ಡಾ. ಮಹಾದೇವ ಹೆಬ್ಬಾಳ, ಡಾ. ಕೆಂಪಣ್ಣ ಕಡಲಗಿ, ಡಾ. ತುಕಾರಾಮ ಉಮರಾಣಿ, ಡಾ. ಕಲ್ಲಪ್ಪ ಬಾಗಿ, ಡಾ. ಆರ್.ಎಂ. ಬಡಿಗೇರ ಅವರನ್ನು ಸನ್ಮಾನಿಸಿದರು.
ಪ್ರತಿಷ್ಠಾನದ ಸದಸ್ಯರಾದ ಈರಣ್ಣ ಮುನ್ನೋಳಿಮಠ, ಗುರುಸಿದ್ದಯ್ಯ ಹಿರೇಮಠ, ಮೃತುಂಜಯ್ಯ ಹಿರೇಮಠ, ರಾಜು ಹಿರೇಮಠ, ಸಿದ್ಧೇಶ್ವರ ಹಿರೇಮಠ, ರಾಜಶ್ರೀ ಹಿರೇಮಠ, ಜ್ಯೋತಿ ರಾಮದುರ್ಗ, ಮಾಲಾ ದಬಾಡಿ ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 