ವೈದ್ಯರು ನಿತ್ಯದ ಜನ ಸೇವೆ ಮೂಲಕ ಸಮಾಜಮುಖಿ ಕಾರ್ಯ : ಡಾ.ತಿರ್ಲಾಪೂರ
Doctors do social work through daily public service: Dr. Tirlapura
ಶಿಗ್ಗಾವಿ 04: ವೈದ್ಯರು ನಿತ್ಯದ ಜನ ಸೇವೆ ಮಾಡುವ ಮೂಲಕ ಸಮಾಜಮುಖಿ ಕಾರ್ಯ ಮಾಡುತ್ತಿದ್ದಾರೆ. ಅದರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯವಾಗಿದೆ ಎಂದು ಪಿನಿಕ್ಸ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ. ಎಂ.ತಿರ್ಲಾಪುರ ಹೇಳಿದರು. ಫಿನಿಕ್ಸ್ ಇಂಟರನ್ಯಾಷನಲ್ ಶಾಲೆಯ ಆವರಣದಲ್ಲಿ ನಡೆದ ವಿಶ್ವ ವೈದ್ಯರ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾಯಕದ ಮೌಲ್ಯ ಹೆಚ್ಚಳವಾಗಲು ಅದರಲ್ಲಿ ಸೇವಾ ಮನೋಭಾವನೆ ಮುಖ್ಯವಾಗಿದೆ. ಕಾಯಕದ ಮೇಲೆ ನಂಬಿಕೆ, ವಿಶ್ವಾಸವಿಟ್ಟು ಕಾರ್ಯ ನಿರ್ವಹಿಸಿದಾಗ ಯಶಸ್ವಿ ಬೆನ್ನಟ್ಟಿ ಬರಲು ಸಾಧ್ಯವಿದೆ. ಅಂತಹ ಕಾಯಕ ನಿಷ್ಠೆ ನಮ್ಮದಾಗಬೇಕು. ಸಮಾಜಕ್ಕೆ ಉತ್ತಮ ಸಂದೇಶ ನೀಡುವುದು ಅವಶ್ಯವಾಗಿದೆ. ಅದಕ್ಕೆ ಸಮಾಜವು ಸಹ ಬೆಂಬಲವಾಗಿ ನಿಲ್ಲಬೇಕು ಎಂದರು.
ಮಕ್ಕಳ ತಜ್ಞ ಡಾ.ಅವಿನಾಶ ರಾಜಮಾನೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಫಿನಿಕ್ಸ್ ಇಂಟರನ್ಯಾಷನಲ್ ಶಾಲೆ ಉಪಾಧ್ಯಕ್ಷ ನರಹರಿ ಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿನಿಕ್ಸ ಸಂಸ್ಥೆ ಕಾರ್ಯದರ್ಶಿ ಡಾ.ರಾಣಿ ತಿರ್ಲಾಪುರ, ಪ್ರಾಚಾರ್ಯ ಗಂಗಾಧರ, ಶಶಾಂಕ ದೇಶಪಾಂಡೆ ಸೇರಿದಂತೆ ಶಿಕ್ಷಕರು, ಸಿಬ್ಬಂದಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 