ವೈದ್ಯರು ಸರ್ಕಾರಿ ಸೇವೆಗೆ ಆದ್ಯತೆ ಕೊಡಲಿ : ಬಿ.ಸಿ.ಪಾಟೀಲ್
ಕೊಪ್ಪಳ, ಮೇ18, ವೈದ್ಯಕೀಯ ಶಿಕ್ಷಣ ಪಡೆದ ವೈದ್ಯರು ಖಾಸಗಿ ಸೇವೆಗಿಂತ ಸರ್ಕಾರಿ ಸೇವೆಗೆ ಹೆಚ್ಚಿನ ಆದ್ಯತೆ ನೀಡಲಿ ಎಂದು ಕೃಷಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಗತಿಪರಿಶೀಲನಾ ಸಭೆಗೂ ಮುನ್ನ ಇಲ್ಲಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪಳ ಅಷ್ಟೇ ಅಲ್ಲದೇ ರಾಜ್ಯದ ಬಹುತೇಕ ಕಡೆ ಸರ್ಕಾರಿ ವೈದ್ಯರ ಕೊರತೆಯಿದೆ.ಇದಕ್ಕೆ ವೈದ್ಯರು ಖಾಸಗಿ ಸೇವೆಯತ್ತ ಹೆಚ್ಚು ಆಸಕ್ತಿ ತೋರುತ್ತಿರುವುದೇ ಕಾರಣ ಎಂದರು. ವೈದ್ಯರು ಸರ್ಕಾರಿ ಸೇವೆಗೆ ಹೆಚ್ಚಿನ ಆದ್ಯತೆ ಕೊಡಲಿ.ಇದರಿಂದ ಗ್ರಾಮೀಣ ಜನರಲ್ಲಿಯೂ ಸರ್ಕಾರಿ ವೈದ್ಯರ ಬಗ್ಗೆ ಉತ್ತಮ ಅಭಿಪ್ರಾಯ ಮೂಡಲು ಸಹಕಾರಿಯಾಗಲಿದೆ ಸರ್ಕಾರ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಿದೆ ಎಂದರು.ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ತಾವು ಕಳೆದ ತಿಂಗಳು ಕೋವಿಡ್-19 ಲಾಕ್ಡೌನ್ನಿಂದ ರೈತರು ಮತ್ತು ಕೃಷಿ ಚಟುವಟಿಕೆಗಳ ಸ್ಥಿತಿಗತಿ ಬಗ್ಗೆ ಅರಿಯಲು ಭೇಟಿ ನೀಡಿ ಸಭೆ ನಡೆಸಲಾಗಿತ್ತು.ಈಗ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚರ್ಚಿಸಲು ಎಲ್ಲಾ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿರುವುದಾಗಿ ಸಚಿವರು ಹೇಳಿದರು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 