ಗಡಿನಾಡ ತಾಲೂಕಿನಲ್ಲಿ ದೊಡ್ಡಾಟ ಪ್ರದರ್ಶನ

ಶಿಗ್ಗಾವಿ 01 : ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದೊಂದಿಗೆ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ ಜತ್ತ ತಾಲೂಕಿನ ಗುಡ್ಡಾಪೂರ ದಾನಮ್ಮದೇವಿ ಸುಕ್ಷೇತ್ರದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಆಯೋಜಿಸಿರುವ ಹೊರನಾಡ ಕನ್ನಡಿಗರ ಸಮಾವೇಶದಲ್ಲಿ ತಾಲೂಕಿನ ದೊಡ್ಡಾಟ ಬಳಗದಿಂದ ಪ್ರದರ್ಶನ ನೇರವೇರಿತು.  

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹಾಗೂ ಗಡಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಸೇರಿದಂತೆ ಅಧಿಕಾರಿಗಳು ಹಾಗೂ ಕಲಾ ಪ್ರೇಮಿಗಳು ಉಪಸ್ಥಿತರಿದ್ದರು.