ಶಾಲೆಗೆ ಹೋಗುವ ವಿದ್ಯಾರ್ಥಿನಿ ಮೇಲೆ ನಾಯಿ ದಾಳಿ
Dog attacks school going student
ವರದಿ: ರವಿಕುಮಾರ ತುಪ್ಪದ ಕೊಲ್ಹಾರ
ಕೊಲ್ಹಾರ 21: ಶಾಲೆಗೆ ಹೋಗುವ 11 ವರ್ಷದ ವಿದ್ಯಾರ್ಥಿಯನ್ನು ಬೀದಿನಾಯಿಗಳು ಎಳೆದಾಡಿ ಕಚ್ಚಿರುವ ಹೃದಯ ವಿದ್ರಾವಕ ಘಟನೆ ಶುಕ್ರವಾರ ಮುಂಜಾನೆ ತಾಲೂಕಿನ ಸಿದ್ದನಾಥ ಗ್ರಾಮದಲ್ಲಿ ನಡೆದಿದೆ ಸಿದ್ರಾಮಪ್ಪ ನಿಡಗುಂದಿ ಅವರ ಪುತ್ರಿ ತನುಶ್ರೀ (11)ವರ್ಷ ವಿದ್ಯಾರ್ಥಿನಿ ಸಿದ್ದನಾಥ ಗ್ರಾಮದಲ್ಲಿ ಶಾಲೆಗೆ ಹೋಗುವ ವೇಳೆ ಬೀದಿ ನಾಯಿಗಳು ಏಕಾಏಕಿ ಸುತ್ತುವರಿದು ಎಳೆದಾಡಿ ಕೈಗೆ ಮತ್ತು ಕಾಲಿಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ತೆಲಗಿ ಗ್ರಾಮದ ಪ್ರಾಥಮಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಇಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬಸವನ ಬಾಗೇವಾಡಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದಾರೆ ಎಂದು ಮಗುವಿನ ಸಂಬಂಧಿಕರು ಮಾಹಿತಿ ತಿಳಿಸಿದ್ದಾರೆ.
ಗ್ರಾಮದಲ್ಲಿ ಇಷ್ಟೆಲ್ಲಾ ಘಟನೆಗಳು ಸಂಭವಿಸಿದರು ಬೀದಿನಾಯಿ ದಾಳಿಗೆ ಒಳಗಾದ ತನುಶ್ರೀ ಕುಟುಂಬದ ಮನೆಗೆ ಹಾಗೂ ಕುರಿ ಸಾವನ್ನಪ್ಪಿದ ಸ್ಥಳಕ್ಕೆ ಸ್ಥಳಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾಗಲಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಇದುವರೆಗೆ ಭೇಟಿ ನೀಡಿಲ್ಲಾ. ಕೂಡಲೇ ಬೀದಿನಾಯಿಗಳಿಗೆ ಕಡಿವಾಣ ಹಾಕಬೇಕು ಬೀದಿನಾಯಿಗಳಿಂದ ಹಾನಿಯಾದ ಕುಟುಂಬಕ್ಕೆ ಚಿಕಿತ್ಸೆ ಪರಿಹಾರ ನೀಡಬೇಕು ಇರದೆ ಹೋದರೆ ಸಿದ್ದನಾಥ ಗ್ರಾಮ ಪಂಚಾಯಿತಿಗೆ ಬಿಗ್ ಜಡಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಕೊಲ್ಹಾರ ತಾಲೂಕು ಸಿದ್ದಾನಥ ಗ್ರಾಮದ ಹೊರವಲಯದಲ್ಲಿ ಜಮೀನಿನಲ್ಲಿ ಬೀದಿನಾಯಿಗಳ ದಾಳಿಗೆ ಯಂಕಪ್ಪ ಮಳೆಪ್ಪನವರಿಗೆ ಸೇರಿದ್ದ 5 ಕುರಿ ಮರಿಗಳು ಸಾವನ್ನಪ್ಪಿ 2 ಕುರಿ ಮರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಮನಕ್ಕೆ ತಂದು ಬೀದಿನಾಯಿಗಳ ನಾಯಿಗಳನ್ನು ಹಿಡಿಯುವುದಕ್ಕೆ ಕ್ರಮ ಕೈಗೊಳ್ಳುತ್ತೇನೆ.
- ಆನಂದ ಕೊಟ್ಯಾಳ ಸಿದ್ದನಾಥ ಗ್ರಾಂ ಪಂ. ಅಭಿವೃದ್ಧಿ ಅಧಿಕಾರಿ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 