ಎರಡು ತಿಂಗಳ ಬಳಿಕ ದೇಶೀಯ ವಿಮಾನ ಸೇವೆ ಆರಂಭ
ನವದೆಹಲಿ, ಮೇ 25,ಕೋವಿಡ್ 19 ನಿಯಂತ್ರಿಸಲು ಆರೋಗ್ಯ ಸಚಿವಾಲಯ ಹೊರಡಿಸಿದ ತಡೆಗಟ್ಟುವ ಮಾರ್ಗಸೂಚಿಗಳಿಗೆ ಅನುಸಾರವಾಗಿ, ಸ್ಥಗಿತಗೊಳಿಸಲಾಗಿದ್ದ ದೇಶೀಯ ವಿಮಾನ ಸೇವೆ ಎರಡು ತಿಂಗಳ ನಂತರ ಸೋಮವಾರ ಪುನರಾರಂಭಗೊಂಡಿವೆ.ಮೊದಲ ವಿಮಾನ ಇಂದು ಬೆಳಿಗ್ಗೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 3 ರಿಂದ ಪುಣೆಗೆ ಬೆಳಗ್ಗೆ 4: 45 ಗಂಟೆಗೆ ಹೊರಟು 7: 55 ಗಂಟೆಗೆ ತಲುಪಿದೆ.ಕೋವಿಡ್ ಹರಡುವಿಕೆ ನಿಯಂತ್ರಿಸುವ ದೃಷ್ಟಿಯಿಂದ ದೇಶಾದ್ಯಂತ ಬೀಗ ಹಾಕಿದ್ದರಿಂದ ಎರಡು ತಿಂಗಳಿನಿಂದ ಆಂತರಿಕ ವಾಯು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.
ಈ ಹಿಂದೆ ನಾಗರಿಕ ವಿಮಾನಯಾನ ಸಚಿವರು ಕೋವಿಡ್ 19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವಿಮಾನ ಕಾರ್ಯಾಚರಣೆಯನ್ನು ಪುನರಾರಂಭಿಸುವುದಾಗಿ ಘೋಷಿಸಿದ್ದರು. ವೈರಸ್ ಹರಡುವಿಕೆಯನ್ನು ತಡೆಗಟ್ಟಲು, ಮಾರ್ಚ್ 25 ರಂದು ಸರ್ಕಾರವು ದೇಶೀಯ ವಾಯು ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದರೆ,ಮಾರ್ಚ್ 22 ರಂದು ಅಂತರರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಕಳೆದ ಎರಡು ತಿಂಗಳುಗಳಲ್ಲಿ, ಕೆಲವು ವಿಶೇಷ ಅನುಮತಿ ವಿಮಾನಗಳ ಜೊತೆಗೆ ಅಗತ್ಯ ಸರಕು ವಿಮಾನಗಳು ಮಾತ್ರ ಸೀಮಿತ ಆಧಾರದ ಮೇಲೆ ಸಂಚರಿಸಿವೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 