ಪ್ರವಚನದಿಂದ ಮನಸ್ಸಿಗೆ ನೆಮ್ಮದಿ: ನೀಲಕಂಠ ಶಿವಾಚಾರ್ಯ ಶ್ರೀ
ಲೋಕದರ್ಶನವರದಿ
ಗುಳೇದಗುಡ್ಡ16: ಪ್ರತಿಯೊಬ್ಬರು ಧಾಮರ್ಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು. ಪಾಶ್ಚಿಮಾತ್ಯ ಅನುಕರಣೆಯಲ್ಲಿ ನಮ್ಮ ಸಂಸ್ಕೃತಿಯನ್ನು ಕಡೆಗಣಿಸಬಾರದು. ನಮ್ಮ ಸಂಸ್ಕೃತಿ ಆಚಾರ ವಿಚಾರಗಳನ್ನು ನಾವು ಪಾಲಿಸುವದರ ಜೊತೆಗೆ ನಮ್ಮ ಮುಂದಿನ ಪೀಳಿಗೆಗೂ ಮುಂದುವರೆಸಬೇಕು ಎಂದು ಅಮರೇಶ್ವರ ಮಠದ ನೀಲಕಂಠ ಶಿವಾಚಾರ್ಯ ಶ್ರೀಗಳು ಹೇಳಿದರು.
ಅವರು ಸಮೀಪದ ತೊಗುಣಶಿ ಗ್ರಾಮದಲ್ಲಿ ಶ್ರೀ ಅಮರೇಶ್ವರ ಮಠದ ಶ್ರೀ ಜಗದ್ಗುರು ವಿಶ್ವರಾಧ್ಯರ 17ನೇ ರಥೋತ್ಸವದ ನಿಮಿತ್ಯವಾಗಿ ಅಕ್ಕನ ಪ್ರವಚನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಪ್ರವಚನಗಳು ಜನರಿಗೆ ಆಧ್ಯಾತ್ಮದ ಅರಿವು ಮೂಡಿಸುವದರ ಜೊತೆಗೆ ಪ್ರವಚನ ಆಲಿಕೆಯಿಂದ ಮನಸ್ಸಿಗೆ ನೆಮ್ಮದಿ ಲಭಿಸುತ್ತದೆ ಎಂದು ಹೇಳಿದರು. ಪ್ರವಚನಕಾರರಾದ ಡಾ|| ಈಶ್ವರಾನಂದ ಶ್ರೀಗಳು ಪ್ರವಚನ ನಡೆಸಿಕೊಟ್ಟು ಮಾತನಾಡಿ, ಪ್ರವಚನಗಳು ಮಹಾನ್ ಶರಣರು ನಡೆಸಿದ ಮೌಲ್ಯಯುತ ಜೀವನದ ಬಗ್ಗೆ ತಿಳಿಸಿಕೊಡುತ್ತವೆ. ಅಮರೇಶ್ವರ ಮಹಾಸ್ವಾಮಿಗಳು ಉಭಯವೈದ್ಯ ಪಂಡಿತರಾಗಿ ಈ ಭಾಗದ ಜನರ ಕಷ್ಟಗಳ ನಿವಾರಣೆಗೆ ಶ್ರಮಿಸಿದ ಮಹಾನ್ ಶರಣರು ಎಂದು ಹೇಳಿದರು.
ಗ್ರಾಪಂ ಉಪಾಧ್ಯಕ್ಷೆ ಬೇವಿನಮಟ್ಟಿ, ಪಿಕೆಪಿಎಸ್ ಅಧ್ಯಕ್ಷ ಎಸ್.ಎಂ.ಪಾಟೀಲ, ಕೋಟೆಕಲ್ ಪಿಕೆಪಿಎಸ್ ಅಧ್ಯಕ್ಷ ಮಹಾಗುಂಡಪ್ಪ ಸುಂಕದ, ರಂಗನಾಥ ಜಾನಮಟ್ಟಿ, ಶಿವು ವಾಲಿಕಾರ, ನಾಗನಗೌಡರ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 