ಕೂಸಿನ ಮನೆಯ ನಿರ್ಲಕ್ಷ್ಯ ಬೇಡ: ಮಲ್ಲನಗೌಡ ಕೆ.ಎಸ್
Don't neglect nursing home: Mallan Gowda K.S
ಕೂಸಿನ ಮನೆಯ ನಿರ್ಲಕ್ಷ್ಯ ಬೇಡ: ಮಲ್ಲನಗೌಡ ಕೆ.ಎಸ್.
ಕಂಪ್ಲಿ 05: ಸರ್ಕಾರದ ಮಹಾತ್ವಾಂಕ್ಷಿ ಯೋಜನೆಯಲ್ಲಿ ಒಂದಾದ ಕೂಸಿನ ಮನೆ ಯೋಜನೆಯ ಬಗ್ಗೆ ನಿರ್ಲಕ್ಷ್ಯವಹಿಸುವುದು ಸರಿಯಲ್ಲ, ಈ ಯೋಜನೆಯನ್ನು ಯಶಸ್ವಿಗೊಳಿಸಲು ಕೂಸಿನ ಮನೆ ಸಮಿತಿಯ ಎಲ್ಲಾ ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮಹಾತ್ಮಾಗಾಂಧಿ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಮಲ್ಲನಗೌಡ ಕೆ.ಎಸ್.ತಿಳಿಸಿದರು. ಅವರು ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಏರಿ್ಡಸಿದ್ದ ಕೂಸಿನ ಮನೆ ಮೇಲ್ವಿಚಾರಣೆ ಸಮಿತಿ ಸದಸ್ಯರ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕೂಸಿನ ಮನೆಯನ್ನು ಯಾರೂ ನಿರ್ಲಕ್ಷಿಸಬಾರದು.ಮನರೇಗಾ ಕೂಲಿ ಕಾರ್ಮಿಕರ ಮೂರು ವರ್ಷದ ಒಳಗಿನ ಮಕ್ಕಳ ಆರೈಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುಲು ಕೂಸಿನ ಮನೆಯ ಉದ್ದೇಶ, ಗುರಿ ಮತ್ತು ಮೇಲ್ವಿಚಾರಣೆ ಸಮಿತಿ ಕರ್ತವ್ಯಗಳ ಕುರಿತು ಸಮಗ್ರ ಮಾಹಿತಿಯನ್ನು ಕಾರ್ಯಾಗಾರದಲ್ಲಿ ನೀಡಲಾಗುವುದು ಎಂದರು. ಕಾರ್ಯಾಗಾರದಲ್ಲಿ ತಾಲ್ಲೂಕಿನ ಹಂಪಾದೇವನಹಳ್ಳಿ, ಸುಗ್ಗೇನಹಳ್ಳಿ, ನಂ10 ಮುದ್ದಾಪುರ, ದೇವಸಮುದ್ರ, ಸಣಾಪುರ, ನೆಲ್ಲುಡಿ ಗ್ರಾಮ ಪಂಚಾಯತಿ ಸಮಿತಿಗಳಿಗೆ ತರಬೇತಿ ಕಾರ್ಯಾಗಾರ ನಡೆಯಲಿದೆ ಎಂದರು. ಗ್ರಾ.ಪಂ.ಅಧ್ಯಕ್ಷೆ ಈರಮ್ಮ ಪೂಜಾರಿ, ಪಿಡಿಒ ಬೀರಲಿಂಗ, ಹನುಮಂತ, ತಾಲ್ಲೂಕು ಸಂಯೋಜಕ ಹನುಮೇಶ್ ಸೇರಿದಂತೆ ಇತರರು ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 