ರಕ್ತದಾನ ಮಾಡುವುದರಿಂದ ಜ್ಞಾಪಕ ಶಕ್ತಿ ವೃದ್ಧಿಸುತ್ತದೆ: ಡಾ.ಅರುಂಧತಿ ಕುಲಕರ್ಣಿ
Donating blood improves memory: Dr. Arundhati Kulkarni
ಗದಗ 26: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲಾ ್ಲಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಗದಗ ಹಾಗೂ ಬಸವೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಗದಗ ಇವರುಗಳ ಆಶ್ರಯದಲ್ಲಿ ಗದಗ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ. ಅರುಂಧತಿ ಕುಲಕರ್ಣಿರವರು ಮಾತನಾಡಿ ಸ್ಪರ್ಧೆಯಲ್ಲಿ ಸೋಲು ಗೆಲವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ ಹೆಚ್.ಐ.ವಿ. ಏಡ್ಸ್ ಸಾಮಾನ್ಯ ಖಾಯಿಲೆಯಾಗಿದ್ದು, ಕೋವಿಡ್ನಷ್ಟು ಭಯಾನಕ ಇಲ್ಲ. ಹಾಗೂ ಇದನ್ನು ಓಷೊಧಪಚಾರವನ್ನು ತೆಗೆದುಕೊಂಡು ಜೀವನಾವಧಿಯನ್ನು ಹೆಚ್ಚಿಗೆ ಮಾಡಬಹುದು ಎಂದು ತಿಳಿಸಿದರು. ಹಾಗೂ ರಕ್ತದಾನದ ಮಹತ್ವವನ್ನು ತಿಳಿಸುತ್ತಾ 18 ವರ್ಷತುಂಬಿದವರು, ಹಿಮೋಗ್ಲೋಬಿನ್ ಪ್ರಮಾಣ 12.5 ಮಿ.ಗ್ರಾಇರುವವರು ಹಾಗೂ 45 ಕೆ.ಜಿ.ಕ್ಕಿಂತ ಹೆಚ್ಚಿಗೆತೂಕ ಉಳ್ಳವರು, ಯಾರಬೇಕಾದರೂ ರಕ್ತದಾನ ಮಾಡಬಹುದು ಹಾಗೂ ರಕ್ತದಾನ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಜ್ಞಾಪಕ ಶಕ್ತಿ ವೃದ್ಧಿಸುತ್ತದೆ. ಹೊಸ ರಕ್ತಉತ್ಪಾದನೆಯಾಗಲು ಪ್ರೇರೆಪಣೆ ಕೊಡುತ್ತದೆ. ಮತ್ತುಕ್ಯಾನ್ಸರ್ ಮತ್ತು ಹೃದಯದ ಖಾಯಿಲೆಯನ್ನು ತಡೆಗಟ್ಟಬಹುದು ಹಾಗಾಗಿ ಪ್ರತಿಯೊಬ್ಬರೂ ಜೀವನದಲ್ಲಿಒಂದು ಬಾರಿಯಾದರೂ ರಕ್ತದಾನ ಮಾಡಿ ಎಂದು ಕರೆ ನೀಡಿದರು
ಬಸವರಾಜ ಲಾಲಗಟ್ಟಿ ಯುವ ಜನರಲ್ಲಿ ರಕ್ತದಾನದ ಹಾಗು ಹೆಚ್.ಐ.ವಿ. ಏಡ್ಸ್ ಬಗ್ಗೆ ಅರಿವು ಮೂಡಿಸುವುದು ಈ ರಸಪ್ರಶ್ನೆ ಸ್ಪರ್ಧೆಯ ಉದ್ದೇಶವಾಗಿದ್ದು, ಹೆಚ್.ಐ.ವಿ. ಏಡ್ಸ್ ನಿಯಂತ್ರಣ ಸೇವೆ, ಸೌಲಭ್ಯ, ಕಳಂಕ ಮತ್ತು ತಾರತಮ್ಯ ಹಾಗೂ ರಾಷ್ರೀಯ ಸಹಾಯವಾಣಿ, ಹೆಚ್.ಐ.ವಿ. ಏಡ್ಸ್ಕಾಯ್ದೆ 2017 ಹಾಗೂ ರಕ್ತದಾನದ ಬಗ್ಗೆ ರಸಪ್ರಶ್ನೆ ಒಳಗೊಂಡಿರುತ್ತದೆ ಎಂದು ತಿಳಿಸಿದರು. ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ವಿದ್ಯಾರ್ಥಿನಿ ಕು.ಸೃಷ್ಠಿ ತುಳಸಿಗೇರಿ ಹಾಗೂ ಕು.ಶ್ರೇಯಾ ಸುಣಗಾರ, ದ್ವೀತಿಯ ಸ್ಥಾನವನ್ನುಸರಕಾರಿಆದರ್ಶ ವಿದ್ಯಾಲಯ ಇಟಗಿಯ ಕು.ಸಂಜನಾ ಸುಬೇದಾರ ಮತ್ತು ಕು.ನಿರ್ಮಲಾ ಕವಲೂರ, ತೃತೀಯ ಸ್ಥಾನವನ್ನುಆದರ್ಶ ವಿದ್ಯಾಲಯ ಕೊರ್ಲಹಳ್ಳಿಯ ಕು.ಸಮೀಕ್ಷಾ ಹಾಗೂ ಮಹಾಲಕ್ಷ್ಮಿಇಲ್ಲೂರ ಪಡೆದುಕೊಂಡರು. ವಿಜೇತರಾದವರಿಗೆ ಪ್ರಶಸ್ತಿ ಪತ್ರ ಮತ್ತು ನಗದು ವಿತರಿಸಲಾಯಿತು. ಸಮಾರಂಭದಲ್ಲಿ ಪ್ರೌಢಶಾಲೆಯ ಶಿಕ್ಷಕರು ಸಿಬ್ಬಂದಿ ವರ್ಗ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 