ರಕ್ತದಾನ ಶ್ರೇಷ್ಠ ದಾನ: ನಬಿವಾಲೆ
ಬಾಗಲಕೋಟೆ 21: ಎಲ್ಲ ದಾನಗಳಲ್ಲಿ ರಕ್ತ ದಾನವು ಶ್ರೇಷ್ಠವಾದ ದಾನವಾಗಿದ್ದು, ಈ ದಾನದಿಂದ ಪ್ರಾಣಾಪಾಯದಲ್ಲಿ ಇರುವವರನ್ನು ಉಳಿಸಬಹುಗಿದೆ. ಜನತೆ ರಕ್ತದಾನ ಮಾಡುವುದರ ಕಡೆಗೆ ಒಲವು ತೋರಬೇಕೆಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಹಾಗೂ ಜಿಲ್ಲಾ ವಕ್ಫಬೋರ್ಡ ಅಧ್ಯಕ್ಷರಾದ ಮೈನುದ್ದೀನ ನಬಿವಾಲೆ ಹೇಳಿದರು.
ಮೊಹ್ಮದ ಪೈಗಂಬರ ಅವರ ಜನ್ಮೋತ್ಸವದ ಅಂಗವಾಗಿ ಅಂಜುಮನ್ ಸಂಸ್ಥೆ ಸೀರತ್ ಕಮಿಟಿ ಆಶ್ರಯದಲ್ಲಿ ಮರಕಜ-ಎ-ತಂಜೀಮ್ ಅಹ್ಲೆ ಸುನ್ನತ್ಉಲ್ ಜಮಾತ, ಬಾಗಲಕೋಟ ಇವರ ಸಹಯೋಗದಲ್ಲಿ ಕೈಗೊಂಡ ರಕ್ತದಾನ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಬಾಗಲಕೋಟ ಜಿಲ್ಲಾ ಆಸ್ಪತ್ರೆಯ ರೆಡ್ ಬ್ಯಾಂಕ ಅಧಿಕಾರಿಗಳಾದ ಸಿ.ಕೆ. ಮೀನಾ ಇವರು ರಕ್ತದಾನದ ಮಹತ್ವವನ್ನು ಕುರಿತು ತಿಳಿಸಿದರು. ವೇದಿಕೆಯ ಮೇಲೆ ಸೀರತ್ ಕಮೀಟಿ ಅಧ್ಯಕ್ಷರಾದ ನೂರಅಹ್ಮದ ಪಟ್ಟೇವಾಲೆ, ಕಾರ್ಯದಶರ್ಿ ಸಲೀಂ ಮೋಮಿನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಸೀರತ್ ಕಮೀಟಿಯ ಸದಸ್ಯರು, ಗಣ್ಯರು, ಸಿಬ್ಬಂದಿಗಳು ಭಾಗವಹಿಸಿದ್ದರು. ಕುಮಾರ ಬಾವಾಖಾನ ಕುರಾನ ಪಠಣದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶಿಕ್ಷಕ ಎಫ್.ಎನ್.ಜಮಖಾನೆ ಸ್ವಾಗತಿಸಿದರು. ಎಂ. ಎ. ನದಾಫ ಇವರು ನಿರೂಪಿಸಿ, ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 