ಶಾಲಾ ಕಟ್ಟಡ ನಿರ್ಮಾಣಕ್ಕೆ ಒಂದುವರೆ ಎಕ್ಕರೆ ಭೂಮಿ ದಾನ
Donation of one and a half acres of land for the construction of a school building
ಶಾಲಾ ಕಟ್ಟಡ ನಿರ್ಮಾಣಕ್ಕೆ ಒಂದುವರೆ ಎಕ್ಕರೆ ಭೂಮಿ ದಾನ
ಬಳ್ಳಾರಿ 07: ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಾಗನೂರು ಗ್ರಾಮದಲ್ಲಿ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಾಗನೂರು ಗ್ರಾಮದ ನಿವಾಸಿ ಸಿ.ಜಯಲಕ್ಷ್ಮಿ ಹಾಗೂ ರಾಘವ ರೆಡ್ಡಿ ದಂಪತಿಗಳು ಮತ್ತು ಅವರ ಮಕ್ಕಳಾದ ಮಲ್ಲಿಕಾರ್ಜುನ ರೆಡ್ಡಿ, ಶ್ರೀನಿವಾಸ್ ರೆಡ್ಡಿಯವರು ಸೇರಿ ಮಕ್ಕಳ ಶಿಕ್ಷಣಕ್ಕಾಗಿ ಶಾಲಾ ಕಟ್ಟಡಕ್ಕೆ ಒಂದುವರೆ ಎಕ್ಕರೆ ಭೂಮಿಯನ್ನು ದಾನವಾಗಿ ನೀಡಿದ್ದಾರೆ. ಇದರ ಹಿನ್ನೆಲೆಯಲ್ಲಿ ಚಾಗನೂರು ಗ್ರಾಮದ ಹಿರಿಯ ಮುಖಂಡರಾದ ಕರಡಿ ತಿಪ್ಪಯ್ಯ ಮತ್ತು ಅವರ ಮಕ್ಕಳು ಸೇರಿ ಸಿ.ಜಯಲಕ್ಷ್ಮಿ, ರಾಘವ ರೆಡ್ಡಿ ದಂಪತಿಗಳವರಿಗೆ ಸನ್ಮಾನಿಸಿ ಗೌರವಿಸುವ ಮೂಲಕ ಅಭಿನಂದಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಉಚಿತವಾಗಿ ಏನೇಕೊಡಬೇಕಾದರೆ ಇನ್ನೊಬ್ಬರಿಂದ ಲಾಭ ಬಯಸುವುದನ್ನು ಆಲೋಚಿಸಿ ಕೊಡುತ್ತಾರೆ. ಅಂತಾದರಲ್ಲಿ ಮಕ್ಕಳ ಭವಿಷ್ಯ ಚೆನ್ನಾಗಿರಬೇಕು, ಮಕ್ಕಳು ಒಳ್ಳೆ ವಿದ್ಯಾವಂತರಾಗಿ ಊರಿಗೆ, ದೇಶಕ್ಕೆ ಒಳ್ಳೆ ಹೆಸರು ತರಬೇಕೆಂಬ ಕಲ್ಪನೆಯೊಂದಿಗೆ ಗ್ರಾಮಕ್ಕೆ ಉಚಿತವಾಗಿ ಅದೂ ದಾನವಾಗಿ ಚಾಗನೂರು ಗ್ರಾಮದ ರಾಘವ ರೆಡ್ಡಿ ಕುಟುಂಬದವರು ಶಾಲಾ ಕಟ್ಟಡಕ್ಕೆ ಭೂಮಿಯನ್ನು ದಾನವಾಗಿ ನೀಡಿದ್ದಾರೆ. ಆದ್ದರಿಂದ ಗ್ರಾಮದಲ್ಲಿ ಇಡೀ ಗ್ರಾಮಸ್ಥರು ಸೇರಿ ನೂತನ ಕಟ್ಟಡವನ್ನು ಉದ್ಘಟಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಅಲ್ಲದೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೊನೆಯಲ್ಲಿ ಕರಡಿ ತಿಪ್ಪಯ್ಯ ಮತ್ತು ಅವರ ಮಕ್ಕಳು ಸೇರಿ ಸಿ.ಜಯಲಕ್ಷ್ಮಿ ರಾಘವ ರೆಡ್ಡಿ ಕುಟುಂಬದವರಿಗೆ ಸಮಾಜ ಸೇವೆ ಶಕ್ತಿಯನ್ನು ಇನ್ನು ಎತ್ತರಕ್ಕೆ ಬೆಳೆದು ನೂರಾರು ಜಾರಿಗೆ ಆಸರೆಯಾಗಲಿ ಎಂದು ಶುಭ ಹಾರೈಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 