ಪೋಡಾರ ಶಾಲೆಯಿಂದ ವೃದ್ಧಾಶ್ರಮಕ್ಕೆ ದೇಣಿಗೆ
ಬೆಳಗಾವಿ 03: ಶಾಲಾ ಮಕ್ಕಳಿಗೆ ಪುಸ್ತಕೀಯ ಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಹೆಚ್ಚಿಗೆ ಕಲಿಸಬೇಕಾಗಿದೆ. ಬದಲಾಗುತ್ತಿರುವ ಪರಿಸ್ಥಿತಿಯಲ್ಲಿ ಸಂಬಂಧಗಳು ಕೃತಕವಾಗುತ್ತಿವೆ ಹಿಂದಿನ ಕಾಲದ ಕುಟುಂಬ ವ್ಯವಸ್ಥೆ ಹಾಗೂ ಕುಟುಂಬದಲ್ಲಿನ ಪ್ರೀತಿ ವಾತ್ಸಲ್ಯಗಳು ನಶಿಸುತ್ತಾಸಾಗಿ ಸಮಾಜದಲ್ಲಿ ಮಕ್ಕಳು ತಂದೆ ತಾಯಿಗಳನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಿರುವದರಿಂದ ವೃದ್ಧಾಶ್ರಮಗಳ ಸಂಖ್ಯೆಯು ಹೆಚ್ಚುತ್ತಿದೆ. ಮಕ್ಕಳಿಗೆ ಸಮೃದ್ಧಿ ಪಡೆದುಕೊಳ್ಳುವದಕಿಂತ ಸಂತೃಪ್ತಿ ಹೇಗೆ ಪಡೆದುಕೊಳ್ಳಬೇಕೆಂಬುದನ್ನು ಕಲಿಸುವ ಅಗತ್ಯತೆ ಇದೆ ಎಂದು ಪೋಡಾರ ಶಾಲೆಯ ಸಂಯೋಜಕ ಎಸ್,ಎನ್.ದೇಸಾಯಿ ಅಭಿಪ್ರಾಯಪಟ್ಟರು.
ಬೆಳಗಾವಿಯ ದೇವರಾಜ ಅರಸ ಬಡಾವಣೆಯ ನಾಗನೂರು ಶಿವಬಸವೇಶ್ವರ ಟ್ರಸ್ಟಿನ ಚಿನ್ನಮ್ಮಾ ಬ ಹಿರೇಮಠ ವೃದ್ಧಾಶ್ರಮಕ್ಕೆ ಪೋಡಾರ ಶಾಲಾ ಮಕ್ಕಳು ಭೇಟಿನೀಡಿ ಹಿರಿಯನಾಗರಿಕರಿಗೆ ಸಿಹಿತಿಂಡಿ, ಬಿಸ್ಕಿಟ್ ಹಾಗೂ ಬಟ್ಟೆಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಾಲೆಯ ಕಾರ್ಯಕ್ರಮ ಸಂಯೋಜಕಿ ಶೀಲತ ಬಸುತರ್ೆಕರ ಮಾತನಾಡಿ ಹಿರಿಯ ನಾಗರಿಕರ ಬಗ್ಗೆ ಮಕ್ಕಳಲ್ಲಿ ಗೌರವ ಭಾವನೆ ಮೂಡಬೇಕಾಗಿದೆ. ಅಭ್ಯಾಸದ ಜೊತೆಗೆ ಮಕ್ಕಳಲ್ಲಿ ಸಮಾಜದ ಬಗೆಗಿನ ಪ್ರೀತಿ, ಕಳಕಳಿ ಬರುವ ಉದ್ದೇಶದಿಂದ ಇಂತಹ ಬೇಟಿಗಳ ಮೂಲಕ ವಿದ್ಯಾಥರ್ಿಗಳಲ್ಲಿ ಸಮಾಜಮುಖಿ ಚಿಂತನೆ ಬೆಳೆಸಲಾಗುತ್ತಿದೆ ಎಂದರು.
ವೃದ್ಧಾಶ್ರಮಕ್ಕೆ ದೇಣಿಗೆ ನೀಡಿದ ಪೋಡಾರ ಶಾಲೆಯ ಮಕ್ಕಳು ಹಾಗೂ ಆಡಳಿತ ಮಂಡಳಿಯವರನ್ನು ವೃದ್ಧಾಶ್ರಮದ ಸಂಯೋಜಕ ಎಂ.ಎಸ್.ಚೌಗಲಾ ಅಭಿನಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 