ಡೋಣಿ ನದಿಗೆ ಪ್ರವಾಹ: ಪ್ರಮುಖ ರಸ್ತೆಗಳ ಸಂಚಾರ ಸ್ಥಗಿತ
Doni River floods: Traffic on major roads disrupted
ಡೋಣಿ ನದಿಗೆ ಪ್ರವಾಹ: ಪ್ರಮುಖ ರಸ್ತೆಗಳ ಸಂಚಾರ ಸ್ಥಗಿತ
ತಾಳಿಕೋಟಿ 10: ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಡೋಣಿ ನದಿಗೆ ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಪ್ರವಾಹ ಬಂದಿರುವುದರಿಂದ ಪಟ್ಟಣದಿಂದ ಮುದ್ದೇಬಿಹಾಳ ಹಾಗೂ ವಿಜಯಪುರಕ್ಕೆ ಹೋಗುವ ಎರಡೂ ಮಾರ್ಗಗಳು ಸಂಪೂರ್ಣ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂಥಹ ಪರಿಸ್ಥಿತಿ ನಿರ್ಮಾಣವಾಗಿದೆ.
ತಾಳಿಕೋಟಿ ವಿಜಯಪುರ ಮಾರ್ಗದ ಮುಖ್ಯ ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಕೆಳ ಸೇತುವೆ ಸಂಚಾರಕ್ಕೆ ಬಳಸಿಕೊಳ್ಳಲಾಗುತ್ತಿತ್ತು ಆದರೀಗ ಅದು ಸಂಪೂರ್ಣ ಜಲಾವೃತಗೊಂಡಿರುವುದರಿಂದ ಮೂಕಿಹಾಳ ಗ್ರಾಮದ ಹತ್ತಿರ ಸೋಗ್ಲಿ ಹಳ್ಳಕ್ಕೆ ನಿರ್ಮಾಣ ಮಾಡಿದ ಸೇತುವೆಯ ಮೂಲಕ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು ಇವತ್ತು ಅದು ಕೂಡಾ ಜಲಾವೃತಗೊಂಡು ಸಂಚಾರ ಮಾಡದ ಪರಿಸ್ಥಿತಿ ಉದ್ಭವಿಸಿದೆ, ಹೀಗಾಗಿ ತಾಳಿಕೋಟಿ ಪಟ್ಟಣದಿಂದ ಮುದ್ದೇಬಿಹಾಳ ಹಾಗೂ ವಿಜಯಪುರಕ್ಕೆ ಹೋಗುವ ಎರಡು ಪ್ರಮುಖ ಮಾರ್ಗಗಳು ಸಂಪರ್ಕ ಕಳೆದುಕೊಂಡಿದ್ದು ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಹೋಗಲು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಡೋಣಿ ನದಿ ತಟದ ಬಾಡಿಹಾಳ, ಬೊಮ್ಮನಹಳ್ಳಿ ಗ್ರಾಮಗಳಲ್ಲಿಯೂ ಡೋಣಿ ನದಿಯ ಹಿನ್ನೀರಿನಿಂದಾಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು ತಮ್ಮ ಜಮೀನುಗಳಲ್ಲಿ ಬೆಳೆದು ನಿಂತ ಬೆಳೆ ಹಾಳಾಗಿ ಹೋಗುವ ಸಾಧ್ಯತೆಗಳಿವೆ ಎಂದು ರೈತರು ಕಂಗಲಾಗಿದ್ದಾರೆ. ಪ್ರವಾಹ ಪರಿಸ್ಥಿತಿ ಹಾಗೂ ನೀರಿನ ಮಟ್ಟ ಪರೀಶೀಲಿಸಲು ತಾಳಿಕೋಟಿ ತಹಸಿಲ್ದಾರ್ ಡಾ.ವಿನಯಾ ಹೂಗಾರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 