ಪುಸ್ತಕ, ವಾಣಿಜ್ಯ ಮಳಿಗೆಗೆ ಡಾ.ಅಜಯ ಸಿಂಗ್ ಭೇಟಿ
ಕಲಬುರಗಿ, ಫೆ 7, ಬಿಸಿಲನಾಡು ಕಲಬುರಗಿಯಲ್ಲಿ ನಡೆಯುತ್ತಿರುವ 85ನೇ ಅಖಿಲ ಕನ್ನಡ ಸಾಹಿತ್ಯ ಸಮ್ನೇಳನದ ಮುಖ್ಯ ವೇದಿಕೆ ಹತ್ತಿರ ಸ್ಥಾಪಿಸಲಾಗಿರುವ ಪುಸ್ತಕ ಮತ್ತು ವಾಣಿಜ್ಯ ಮಳಿಗೆಗೆ ಶುಕ್ರವಾರ ಪುಸ್ತಕ ಪ್ರದರ್ಶನ ಮತ್ತು ವಾಣಿಜ್ಯ ಮಳಿಗೆ ಸಮಿತಿಯ ಅಧ್ಯಕ್ಷ, ಶಾಸಕ ಡಾ.ಅಜಯ ಸಿಂಗ್ ಭೇಟಿ ನೀಡಿದರು.ಇದೇ ಸಂದರ್ಭದಲ್ಲಿ ಶಾಸಕರು ಪುಸ್ತಕ ವ್ಯಾಪಾರಿಗಳ ಜತೆ ಸಮಾಲೋಚನೆ ನಡೆಸಿದರು. ಪುಸ್ತಕ ಮಾರಾಟದ ಬಗ್ಗೆ ಹಾಗೂ ಓದುಗರ ಪ್ರತಿಕ್ರಿಯೆ ಬಗ್ಗೆ ಮಾಹಿತಿ ಪಡೆದರು. ತುಂಬಾ ಅಚ್ಚುಕಟ್ಟಾಗಿ ಪುಸ್ತಕ ಮಳಿಗೆ ಮತ್ತು ಲೇಖಕರ ಕಟ್ಟೆ ನಿರ್ಮಿಸಿದ ಸಮಿತಿಯ ಶ್ರಮವನ್ನು ಶ್ಲಾಘಿಸಿದರು.ಇದೇ ಸಂದರ್ಭದ ಸಮಿತಿಯ ಕಾರ್ಯಾಧ್ಯಕ್ಷ ಶರಣಪ್ಪ ಬಿ. ಮಾತನಾಡಿ, ಸಾಹಿತ್ಯ ಸಮ್ಮೇಳನದ ಮೊದಲನೇ ದಿನ 413 ಪುಸ್ತಕ ಮಳಿಗೆಯಿಂದ 60 ಲಕ್ಷ ಮತ್ತು 210 ವಾಣಿಜ್ಯ ಮಳಿಗೆಯಿಂದ 20 ಲಕ್ಷ ರೂ. ವ್ಯಾಪಾರವಾಗಿದೆ ಎಂದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಸತೀಷಕುಮಾರ, ಮಂಜುನಾಥ್ ಅಜಯಕುಮಾರ, ಪರಶುರಾಮ ಕಟ್ಟಿಮನಿ, ಪಾರ್ವತಿ ರೆಡ್ಡಿ ಮತ್ತಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 