ಪುಸ್ತಕ, ವಾಣಿಜ್ಯ ಮಳಿಗೆಗೆ ಡಾ.ಅಜಯ ಸಿಂಗ್ ಭೇಟಿ
ಕಲಬುರಗಿ, ಫೆ 7, ಬಿಸಿಲನಾಡು ಕಲಬುರಗಿಯಲ್ಲಿ ನಡೆಯುತ್ತಿರುವ 85ನೇ ಅಖಿಲ ಕನ್ನಡ ಸಾಹಿತ್ಯ ಸಮ್ನೇಳನದ ಮುಖ್ಯ ವೇದಿಕೆ ಹತ್ತಿರ ಸ್ಥಾಪಿಸಲಾಗಿರುವ ಪುಸ್ತಕ ಮತ್ತು ವಾಣಿಜ್ಯ ಮಳಿಗೆಗೆ ಶುಕ್ರವಾರ ಪುಸ್ತಕ ಪ್ರದರ್ಶನ ಮತ್ತು ವಾಣಿಜ್ಯ ಮಳಿಗೆ ಸಮಿತಿಯ ಅಧ್ಯಕ್ಷ, ಶಾಸಕ ಡಾ.ಅಜಯ ಸಿಂಗ್ ಭೇಟಿ ನೀಡಿದರು.ಇದೇ ಸಂದರ್ಭದಲ್ಲಿ ಶಾಸಕರು ಪುಸ್ತಕ ವ್ಯಾಪಾರಿಗಳ ಜತೆ ಸಮಾಲೋಚನೆ ನಡೆಸಿದರು. ಪುಸ್ತಕ ಮಾರಾಟದ ಬಗ್ಗೆ ಹಾಗೂ ಓದುಗರ ಪ್ರತಿಕ್ರಿಯೆ ಬಗ್ಗೆ ಮಾಹಿತಿ ಪಡೆದರು. ತುಂಬಾ ಅಚ್ಚುಕಟ್ಟಾಗಿ ಪುಸ್ತಕ ಮಳಿಗೆ ಮತ್ತು ಲೇಖಕರ ಕಟ್ಟೆ ನಿರ್ಮಿಸಿದ ಸಮಿತಿಯ ಶ್ರಮವನ್ನು ಶ್ಲಾಘಿಸಿದರು.ಇದೇ ಸಂದರ್ಭದ ಸಮಿತಿಯ ಕಾರ್ಯಾಧ್ಯಕ್ಷ ಶರಣಪ್ಪ ಬಿ. ಮಾತನಾಡಿ, ಸಾಹಿತ್ಯ ಸಮ್ಮೇಳನದ ಮೊದಲನೇ ದಿನ 413 ಪುಸ್ತಕ ಮಳಿಗೆಯಿಂದ 60 ಲಕ್ಷ ಮತ್ತು 210 ವಾಣಿಜ್ಯ ಮಳಿಗೆಯಿಂದ 20 ಲಕ್ಷ ರೂ. ವ್ಯಾಪಾರವಾಗಿದೆ ಎಂದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಸತೀಷಕುಮಾರ, ಮಂಜುನಾಥ್ ಅಜಯಕುಮಾರ, ಪರಶುರಾಮ ಕಟ್ಟಿಮನಿ, ಪಾರ್ವತಿ ರೆಡ್ಡಿ ಮತ್ತಿತರಿದ್ದರು.
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ 