ದೇವನಹಳ್ಳಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಸರಳ ಆಚರಣೆ

ದೇವನಹಳ್ಳಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್  ಜಯಂತಿ ಸರಳ ಆಚರಣೆ

ಬೆಂಗಳೂರು, ಏಪ್ರಿಲ್ 14,ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ "ಡಾ. ಬಿ.ಆರ್ ಅಂಬೇಡ್ಕರ್" ಅವರ 129 ನೇ ಜನ್ಮ ದಿನಾಚರಣೆ"ಯನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು "ಡಾ. ಬಿ.ಆರ್.ಅಂಬೇಡ್ಕರ್" ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪುಷ್ಪನಮನ ಸಲ್ಲಿಸಿದರು.ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಹನುಮಂತರಾಯಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.