ಮನೆ ಮನೆಗಳಿಂದ ವಚನ ಸಾಹಿತ್ಯ ಸಂಗ್ರಹಿಸಿದ್ದ ಡಾ.ಫ.ಗು.ಹಳಕಟ್ಟಿ: ಅಪರ ಜಿಲ್ಲಾಧಿಕಾರಿ

ಕಾರವಾರ 02:  ವಚನ ಸಾಹಿತ್ಯ ದ ಬಗ್ಗೆ ಅಪಾರ ಒಲವು ಹೊಂದಿದ್ದು, ವಚನ ಸಾಹಿತ್ಯದ ಸಂರಕ್ಷಣೆಗೆ ಪಣ ತೊಟ್ಟಿದ್ದ ಡಾ.ಫ.ಗು.ಹಳಕಟ್ಟಿ  ಅವರು ನಾಡಿನಾದ್ಯಂತ ಮನೆ ಮನೆಗಳಗೆ ತೆರಳಿ ,  ವಚನ ಸಾಹಿತ್ಯದ ದಾಖಲೆಗಳನ್ನು ಸಂಗ್ರಹಿಸಿ, ಅವುಗಳನ್ನು ಮುದ್ರಿಸುವ ಮೂಲಕ   ನಾಡಿನ ಜನತೆಗೆ ಅವುಗಳನ್ನು ತಲುಪಿಸುವಂತಹ ಮಹಾನ್ ಕಾರ್ಯ ಮಾಡಿದ್ದರು ಎಂದು  ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಹೇಳಿದರು.  

ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡಾ.ಫ.ಗು.ಹಳಕಟ್ಟಿ ಜನ್ಮದಿನ- ವಜನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಫ.ಗು. ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. 

ಜೀವನದಲ್ಲಿ ಶಿಸ್ತು ಇರಬೇಕು. ಮನಸ್ಸು ಸ್ವಚ್ಛವಾಗಿದ್ದಾರೆ ಎನ್ನಾದರು ಸಾಧಿಸಬಹುದು ಹಾಗಾಗಿ ಮನಸ್ಸನ್ನು ಸ್ವಚ್ಚವಾಗಿಟ್ಟುಕೊಳ್ಳಿ ಹಾಗೂ ನಿರಂತರ ಪರಿಶ್ರಮದಿಂದ ಯಶಸ್ಸು ಕಾಣಲು ಸಾಧ್ಯ . ಹುಟ್ಟು ಉಚಿತ ಸಾವು ಖಚಿತ ಹುಟ್ಟು ಸಾವಿನ ಮಧ್ಯೆ ನಾವು ಹೇಗೆ ಬದುಕುತ್ತವೆ ಸಮಾಜದಲ್ಲಿ ನಮ್ಮ ನಡೆ ನುಡಿ ಹೇಗಿರಬೇಕೆಂಬುದನ್ನು ಅರಿತು ಬದುಕಲು ಇಂತಹ ಮಹಾನ್ ಸಾಧಕರ ಉನ್ನತ ವಿಚಾರ, ಆಚಾರ, ಸಂಸ್ಕ್ರತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳ್ಳಬೇಕು ಎಂದರು. 

ಉಪನ್ಯಾಸ ನೀಡಿದ, ಶಿಕ್ಷಕ ಗಣೇಶ ಬಿಷ್ಠಣ್ಣನವರು ಮಾತನಾಡಿ , ಡಾ.ಫ.ಗು.ಹಳಕಟ್ಟಿ  ಅವರು ವೃತ್ತಿಯಲ್ಲಿ ಶಿಕ್ಷಕ, ಸಾಹಿತಿ, ಪತ್ರಕರ್ತರಾಗಿದ್ದರು. ಇವರು 252 ವಚನಗಾರ ವಚನಗಳನ್ನು ಸಂಗ್ರಹಣೆ ಮಾಡಿದ್ದಾರೆ. ಇವರು ಕೊಡುಗೆಯಿಲ್ಲದೇ ಇದ್ದಲ್ಲಿ ವಚನ ಸಾಹಿತ್ಯವನ್ನು ಕಾಣಲು ಸಾಧ್ಯವಾಗುತ್ತಿರಲಿಲ್ಲ. ಪತ್ರಿಕಾ ಮಾಧ್ಯಮದಿಂದ ಏಕ ಕಾಲಕ್ಕೆ 2ಪತ್ರಿಕೆ ಸಂಪಾದಿಸಿ, ಪ್ರಕಟಿಸಿ ಜನಸಮೂಹದ ಜವಾಬ್ದಾರಿ ತಿಳಿಸುವ ಕಾರ್ಯಕ್ಕೆ ಕೈ ಹಾಕಿದರು 1926ರಲ್ಲಿ ಶಿವಾನುಭವ ಮಾಸಿಕ ಪತ್ರಿಕೆ ,  1927ರಲ್ಲಿ ನವ ಕರ್ನಾಟಕ ಎಂಬ ವಾರ ಪತ್ರಿಕೆ ಆರಂಭಿಸಿದರು. ಇವರ ಸಾಹಿತ್ಯ ಸೇವೆ ಮೆಚ್ಚಿ 1926ರಲ್ಲಿ ಬಳ್ಳಾರಿಯಲ್ಲಿ ನಡೆದ 12ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆ ಮಾಡಿ ಸನ್ಮಾನಿಸಲಾಯಿತು ಎಂದರು.  

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ನಾಗೇಶ್ ರಾಯ್ಕರ್, ಸಾರ್ವಜನಿಕ ಶಿಕ್ಷಣ ಇಲಾಕೆಯ ಅಧಿಕಾರಿ ಶಿವಾನಂದ ಕೋಟಿ, ಪಾಶುಪಾಲನೆ ಇಲಾಖೆಯ ಉಪ ನಿರ್ದೇಶಕ ಮೋಹನ್ ಕುಮಾರ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಮತಿತ್ತರಿದ್ದರು