ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಡಾ. ಕೋಟಗಿ

 ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಡಾ. ಕೋಟಗಿ  Dr. Kotagi met Mallikarjun Kharge and inquired about his health.

ಲೋಕದರ್ಶನ ವರದಿ 

ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಡಾ. ಕೋಟಗಿ  

ಧಾರವಾಡ / ಬೆಂಗಳೂರು 08: ಡಾಕ್ಟರ್ ಶರಣಪ್ಪ ಕೋಟಗಿ, ಕೆಪಿಸಿಸಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ರಾಜ್ಯ ಮುಖ್ಯ ಸಂಯೋಜಕರಾದ ಇವರು ಇಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಇವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು  ಬೇಗ ಗುಣಮುಖರಾಗಲೆಂದು ದೇವರಲ್ಲಿ  ಪ್ರಾರ್ಥಿಸಿದರು.  

ಈ ಸಂದರ್ಭದಲ್ಲಿ ಡಾಕ್ಟರ್ ಶರಣಪ್ಪ ಕೋಟಗಿ ಅವರು ಶುಭ ಹಾರೈಸಿ, ಕಾಂಗ್ರೆಸ್ ಪಕ್ಷಕ್ಕೆ ಮತ್ತು ಈ ರಾಷ್ಟ್ರಕ್ಕೆ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನ ಅವಶ್ಯಕತೆವಾಗಿದ್ದು ಮತ್ತು ನಾವೆಲ್ಲರೂ ಬುದ್ಧ ಬಸವ ಅಂಬೇಡ್ಕರ್ ಅವರ ತತ್ವ ಸಿದ್ಧಾಂತದ ಅಡಿಯಲ್ಲಿ ರಾಜಕಾರಣ ರಾಜ್ಯಭಾರ ಮಾಡುತ್ತಾ ಬಂದಿದ್ದೇವೆ ಮುಂದೆಯೂ ಮಾಡುತ್ತೇವೆ ಎಂದರು.  

ಹಿರಿಯ ಕಾಂಗ್ರೆಸ್ ನಾಯಕ  ಮಾಜಿ ಸಭಾಪತಿಗಳಾದ ಡಾ. ವೀರಣ್ಣ ಮತ್ತಿಕಟ್ಟಿ, ಮಾಜಿ ಸಚಿವ ದೆಹಲಿ ವಿಶೇಷ ಪ್ರತಿನಿಧಿ ಡಿ.ಬಿ ಜಯಚಂದ್ರ ಪ್ರದೇಶ ಕಾಂಗ್ರೆಸ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ವಿಜಯ್ ಮತ್ತಿಕಟ್ಟಿ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೊಂಡಜ್ಜಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.