ಡಾ. ಎಂ. ಎನ್. ಸತ್ಯನಾರಾಯಣರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
Dr. M. N. Satyanarayana receives the Best Teacher Award
ಬೆಳಗಾವಿ 08: ಸಂಗೀತ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಡಾ.ಎಂ.ಎನ್. ಸತ್ಯ ನಾರಾಯಣ ಅವರಿಗೆ ಬೆಂಗಳೂರು ಗಾಂಧಿ ಭವನದಲ್ಲಿ ಪ್ರೆಸ್ ಕ್ಲಬ್ ವೆಲ್ಫೇರ್ ವರ್ಲ್ಡ ವೈಡ್ ಫೌಂಡೇಶನ್ ಅವರು ಆಯೋಜಿಸಿದ್ದ ಅಂತರಾಷ್ಟ್ರೀಯ ಸಾಮಾಜಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅಮೇರಿಕಾ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ಆಡಳಿತ ಹಾಗೂ ಸಮಾಜ ಕಲ್ಯಾಣ ನಿರ್ವಹಣೆಯಲ್ಲಿ ಚಿನ್ನದ ಪದಕ ಪುರಸ್ಕೃತ ಡಾ. ರಾಜಕುಮಾರ್ ಭಾರದ್ವಾಜ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು ಅವರು ಮಾತನಾಡುತ್ತ ’ಹೊಸ ಹೊಸ ಸಾಹಿತಿ, ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವ ಈ ಸಂಸ್ಥೆ ಕಾರ್ಯ ಶ್ಲಾಘನೀಯ’ ಎಂದು ಹೇಳಿದರು.
ಮುಂದೆ ಮಾತನಾಡುತ್ತ ಡಾ. ಭಾರದ್ವಾಜ್ ಅವರು ಬೆಳಗಾವಿಯಲ್ಲಿ ಬ್ಯಾಂಕ್ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿರುವ ಅಲ್ಲದೇ ನಾದಸುಧಾ ಸುಗಮ ಸಂಗೀತ ಶಾಲೆಯ ಸಂಸ್ಥಾಪಕರಾದ ಡಾ. ಎಂ. ಎನ್. ಸತ್ಯನಾರಾಯಣ ಅವರು ಸಂಗೀತ ಸೇವೆಗಾಗಿಯೇ ತಮ್ಮ ಜೀವನವನ್ನು ಸಮರ್ಿಸಿಕೊಂಡವರು. ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಪರಿಚಯಿಸಿದ ಹಿರಿಮೆ ಸತ್ಯನಾರಾಯಣರದ್ದು. ಇವರ ಅಮೂಲ್ಯ ಸೇವೆಗಾಗಿ ಪ್ರೆಸ್ ಕ್ಲಬ್ ವೆಲ್ಫೇರ್ ವೆಲ್ರ್ಡ್ವೈಡ್ ಫೌಂಡೇಶನ್ ಸಂಸ್ಥೆಯಿಂದ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲು ನನಗೆ ಹೆಮ್ಮೆ ಅನ್ನಿಸುತ್ತದೆ ಎಂದು ಅವರು ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 