ರಾಜ್ಯೋತ್ಸವ ಧೀಮಂತ ಪ್ರಶಸ್ತಿಗೆ ಭಾಜನರಾದ ಡಾ.ಮಹಾಂತಸ್ವಾಮಿ
Dr. Mahantaswamy receives Rajyotsava Dheemanta Award
ಧಾರವಾಡ 04: ನಗರದ ಖ್ಯಾತ ಆಯುರ್ವೇದ ತಜ್ಞ ಹಾಗೂ ಸಿ.ಬಿ. ಗುತ್ತಲ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಉಪನ್ಯಾಸಕ ಡಾ. ಮಹಾಂತಸ್ವಾಮಿ ಹಿರೇಮಠ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕೊಡಮಾಡುವ ರಾಜ್ಯೋತ್ಸವದ ಧೀಮಂತ ಪ್ರಶಸ್ತಿಗೆ ಭಾಜನರಾಗಿದ್ದು, ರಾಜ್ಯೋತ್ಸವದ ದಿನ ಹುಬ್ಬಳ್ಳಿಯಲ್ಲಿ ಜರುಗಿದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಧಾರವಾಡದ ಕೃ.ವಿ.ವಿ. ಸಂಘಟಿಸುವ ಕೃಷಿ ಮೇಳದಲ್ಲಿ ತಾವೂ ಸಹ ಒಂದು ಮಳಿಗೆಯನ್ನು ಪಡೆದುಕೊಂಡು ಅಲ್ಲಿ ಆಗಮಿಸುವ ರೈತ ಬಂಧುಗಳಿಗೆ ಆಯುರ್ವೇದ ವೈದ್ಯ ವಿಜ್ಞಾನ ಪದ್ಧತಿಯ ಮೂಲಕ ದೈಹಿಕ ಆರೋಗ್ಯ ಸಂವರ್ಧನೆ ಮಾಡಿಕೊಳ್ಳುವ ಬಗೆಯನ್ನು ಉಚಿತವಾಗಿ ತಿಳಿಸುತ್ತ ಬಂದಿದ್ದಾರೆ. ಜೊತೆಗೆ ಉಳವಿ ಚನ್ನಬಸವೇಶ್ವರರ ಮತ್ತು ಮುರುಘಾಮಠ ಜಾತ್ರೆಯಲ್ಲಿಯೂ ಡಾ.ಮಹಾಂತಸ್ವಾಮಿ ಹಿರೇಮಠ ಅವರು ಆಗಮಿಸಿದ ಭಕ್ತಗಣಕ್ಕೆ ಆಯುರ್ವೇದ ವೈದ್ಯ ವಿಜ್ಞಾನ ಪದ್ಧತಿಯ ಲಾಭಗಳ ಕುರಿತು ತಿಳಿವಳಿಕೆ ನೀಡಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯೂ ಸೇರಿದಂತೆ ರಾಜ್ಯದ ವಿವಿಧ ಹಳ್ಳಿಗಳಲ್ಲಿ ಜರುಗಿದ ಆಯುರ್ವೇದ ವೈದ್ಯ ಪದ್ಧತಿಯ ಉಚಿತ ಶಿಬಿರಗಳಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ವಿನಿಮಯ ಮಾಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 