ಡಾ. ನಾಗಲಕ್ಷ್ಮೀ ಚೌಧರಿ ಅವರ ಧಾರವಾಡ ಜಿಲ್ಲಾ ಪ್ರವಾಸ
Dr. Nagalakshmi Chaudhary's Dharwad district tour
ಲೋಕದರ್ಶನ ವರದಿ
ಧಾರವಾಡ 14: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಮೇ 17, 18 ಮತ್ತು 19, 2026 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮೇ. 17 ರಂದು ಬೆಳಿಗ್ಗೆ 10:30 ಗಂಟೆಗೆ ಧಾರವಾಡದ ಹಳೇ ಪಿ.ಬಿ.ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ಪ್ರಾಂತ್ಯ ಇವರು ಹಮ್ಮಿಕೊಂಡಿರುವ ಮಹಿಳಾ ಅಧಿವೇಶನ-2026 ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ ಮಧ್ಯಾಹ್ನ 12:30 ಗಂಟೆಗೆ ಹುಬ್ಬಳ್ಳಿ ತಾಲ್ಲೂಕಿನ ಅಯೋಧ್ಯ ಗ್ರಾಮದಲ್ಲಿ 161 ಗಿರಿಜನ ಮಹಿಳೆಯರಿಗೆ ಮಂಜೂರು ಆಗಿದ್ದ ಸ್ಥಳಕ್ಕೆ ಭೇಟಿ ನೀಡಿ, ಪರೀಶೀಲಿಸುವರು. ನಂತರ 3:30 ಗಂಟೆಗೆ ಧಾರವಾಡ ನಗರದ ಹಳೆ ಪಿ.ಬಿ.ರಸ್ತೆ ಹತ್ತಿರದಲ್ಲಿರುವ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ಧಾರವಾಡ ಪೊಲೀಸ್ ಹೆಡ ಕ್ವಾರ್ಟಸ್ದಲ್ಲಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡುವರು.
ಮೇ 18 ರಂದು ಬೆಳಿಗ್ಗೆ 9 ಗಂಟೆಗೆ ಧಾರವಾಡ ಜಿಲ್ಲಾ ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡುವರು. ನಂತರ 11 ಗಂಟೆಗೆ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಯೋಜಿಸಿರುವ ಕಓಖಊ ಅಧಿನಿಯಮ 2013 ರ ತರಬೇತಿ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸುವರು.
ನಂತರ 12 ಗಂಟೆಗೆ ಧಾರವಾಡ ಕವಿವಿ ಆವರಣದಲ್ಲಿರುವ ಗಾಂಧಿಭವನದಲ್ಲಿ ಪಿ.ಜಿ ವಿದ್ಯಾರ್ಥಿನಿಯರು ಹಾಗೂ ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸುವರು. ಸಂಜೆ 4 ಗಂಟೆಗೆ ಸವದತ್ತಿ ರಸ್ತೆಯಲ್ಲಿರುವ ಹಳೇ ಎ.ಪಿ.ಎಂ.ಸಿ ಹತ್ತಿರ ವಾಸಿಸುತ್ತಿರುವ ದುರ್ಗಮುರಗಿ, ಕೊರಗ ಮತ್ತು ಇತರೆ ಸಮುದಾಯದವರನ್ನು ಭೇಟಿ ಮಾಡುವರು. ಸಂಜೆ 6 ಗಂಟೆಗೆ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡುವರು.
ಮೇ 19 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಹಿಳಾ ಸ್ಪಂದನ ಹಾಗೂ ಮಹಿಳಾ ಪ್ರಗತಿ ಪರೀಶೀಲನಾ ಸಭೆ ಜರುಗಿಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸುವರು. ನಂತರ ಅಂದು ಸಂಜೆ ಬೆಂಗಳೂರಿಗೆ ಮರುಪ್ರಯಾಣ ಬೆಳೆಸುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 