ಡಾ.ನಾಗರಾಜ ದಂಡೋತಿಗೆ ಉತ್ತಮ ಎನ್.ಎಸ್.ಎಸ್ ಅಧಿಕಾರಿ ಪ್ರಶಸ್ತಿ
Dr. Nagaraj Dandoti receives the Best NSS Officer Award
ಲೋಕದರ್ಶನ ವರದಿ
ಕೊಪ್ಪಳ, ಡಿ,10: ನಗರದ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಡಾ.ನಾಗರಾಜ ದಂಡೋತಿಯವರಿಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ನೀಡುವ 2023-24ನೇ ಸಾಲಿನ ಉತ್ತಮ ಎನ್.ಎಸ್.ಎಸ್ ಅಧಿಕಾರಿ ಪ್ರಶಸ್ತಿ ಲಭಿಸಿದೆ.
ಜೊತೆಗೆ ಮಹಾವಿದ್ಯಾಲಯದ ಬಿ.ಎ ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಶಶಿಕುಮಾರ ಉಳ್ಳಾಗಡ್ಡಿ ಹಾಗೂ ಮುತ್ತಣ್ಣ ಎಂಬ ಇಬ್ಬರು ವಿದ್ಯಾರ್ಥಿಗಳಿಗೂ ಕೂಡಾ ಉತ್ತಮ ಎನ್.ಎಸ್.ಎಸ್ ಸ್ವಯಂ ಸೇವಕ ಪ್ರಶಸ್ತಿಗಳು ಲಭಿಸಿವೆ. ಸದರಿ ಪ್ರಶಸ್ತಿಗಳನ್ನು ಇದೇ ಡಿ, 17ರಂದು ವಿಶ್ವವಿದ್ಯಾಲಯದಲ್ಲಿ ನಡೆಯು ಸಮಾರಂಭದಲ್ಲಿ ಮಾನ್ಯಕುಲಪತಿಗಳು ಪ್ರದಾನ ಮಾಡಲಿದ್ದಾರೆ.
ಪ್ರಶಸ್ತಿ ಪಡೆದ ಪ್ರಾಧ್ಯಾಪಕ ಮತ್ತು ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಸಿಬ್ಬಂದಿ ವರ್ಗ ಹಾಗೂ ಸಕಲ ವಿದ್ಯಾರ್ಥಿ ಬಳಗ ಅಭಿನಂದಿಸಿದೆ.

ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 