ಮೃತ ಯೋಧನ ಕುಟುಂಬಕ್ಕೆ ಡಾ. ಪ್ರಭುಗೌಡ ಲಿಂಗದಳ್ಳಿ ಸಾಂತ್ವನ
Dr. Prabhugowda Lingadalli condoles with the family of the deceased soldier
ಮೃತ ಯೋಧನ ಕುಟುಂಬಕ್ಕೆ ಡಾ. ಪ್ರಭುಗೌಡ ಲಿಂಗದಳ್ಳಿ ಸಾಂತ್ವನ
ತಾಳಿಕೋಟಿ 04: ತಾಲೂಕಿನ ಬಳಗಾನೂರ ಗ್ರಾಮದ ನಿವಾಸಿಯಾದ ಬಿಎಸ್ಎಫ್ ಯೋಧ ಸಿದ್ದಣ್ಣ ಮಾದರ ಅರಳಿಕಟ್ಟಿ ಇವರು ಹರಿಯಾಣ ರಾಜ್ಯದ ಅಗರ್ತಲಾದಲ್ಲಿ ಸೇವಾ ನಿರತರಾದ ಸಮಯದಲ್ಲಿಯೇ ಗುರುವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಈ ಹಿನ್ನಲೆಯಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಖ್ಯಾತ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ಇವರು ರವಿವಾರ ಮೃತ ಯೋಧನ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಧೈರ್ಯ ತುಂಬಿ ಸಾಂತ್ವನ ತಿಳಿಸಿದರು.
ಡಾ.ಪ್ರಭುಗೌಡರು ಮಾತನಾಡಿ ಗಡಿ ರಕ್ಷಣೆಗೆ ನಿಂತ ಮೃತ ಯೋಧ ಸಿದ್ದಣ್ಣ ಅರಳಿಕಟ್ಟಿ ಅವರ ಅಕಾಲಿಕ ನಿಧನವು ತುಂಬಲಾರದ ನಷ್ಟವಾಗಿದ್ದು ಇದನ್ನು ಸಹಿಸುವ ಶಕ್ತಿ ಅವರ ಪತ್ನಿ ಹಾಗೂ ಕುಟುಂಬದ ಸದಸ್ಯರಿಗೆ ಭಗವಂತ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದರು. ಮೃತ ಯೋಧನ ಧರ್ಮಪತ್ನಿ ಕವಿತಾ ಮಾದರ, ಪುತ್ರ ರವಿಕಾಂತ ಮಾದರ, ಪುತ್ರಿ ಡಾ.ಸುಮಿತಾ, ಕುಟುಂಬದ ಸದಸ್ಯರು ಗ್ರಾಮದ ಗಣ್ಯರು ಹಿರಿಯರು ಉಪಸ್ಥಿತರಿದ್ದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 