ಡಾ. ಪ್ರಕಾಶ ಕೊಡ್ಲಿ ಅವರಿಗೆ “ಕರ್ನಾಟಕ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿಗೆ ಭಾಜನ
Dr. Prakash Kodli awarded with the Karnataka Excellence Award
ಬೆಳಗಾವಿ 27: ಡಾ. ಪ್ರಕಾಶ ಕೊಡ್ಲಿ ಪ್ರಾಂಶುಪಾಲರು ಸರ್ಕಾರಿ ಶುಶ್ರೂಷಾ ಶಾಲೆ ಬಿಮ್ಸ್ ಬೆಳಗಾವಿ ಅವರಿಗೆ ರಾಷ್ಟ್ರೀಯ ಮಟ್ಟದ ಗೌರವ ಬೆಂಗಳೂರು, ಮಾರ್ಚ್ 28, 2026:ರಾಜ್ಯದ ನರ್ಸಿಂಗ್ ಶಿಕ್ಷಣ ಕ್ಷೇತ್ರದ ಗಣನೀಯ ವ್ಯಕ್ತಿತ್ವವಾಗಿರುವ ಡಾ. ಪ್ರಕಾಶ ಕೊಡ್ಲಿ ಅವರಿಗೆ “ಕರ್ನಾಟಕ ಎಕ್ಸಲೆನ್ಸ್ ಅವಾರ್ಡ್ 2026” ಅನ್ನು ರಾಷ್ಟ್ರೀಯ ಎಕ್ಸಲೆನ್ಸ್ ಕೌನ್ಸಿಲ್ (ಓಇಅ) ವತಿಯಿಂದ ಪ್ರದಾನಿಸಲಾಯಿತು.ಬೆಂಗಳೂರು ಟೌನ್ ಹಾಲ್ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಕನ್ನಡ ಚಿತ್ರ ನಟಿ ಶೃತಿ, ವಿವಿಧ ಗಣ್ಯರು, ಅಧಿಕಾರಿಗಳು ಮತ್ತು ವಿವಿಧ ಕ್ಷೇತ್ರಗಳ ಸಾಧಕರ ಸಮ್ಮುಖದಲ್ಲಿ ನೀಡಿ ಗೌರವಿಸಲಾಯಿತು.
ಡಾ. ಪ್ರಕಾಶ ಕೊಡ್ಲಿ ಅವರು ಆರೋಗ್ಯ ಸೇವೆ, ನರ್ಸಿಂಗ್ ಶಿಕ್ಷಣ ಹಾಗೂ ವೈದ್ಯಕೀಯ ಸಂಶೋಧನೆ ಕ್ಷೇತ್ರಗಳಲ್ಲಿ ನೀಡಿದ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಅವರ ಸಾಧನೆಗಳ ಪ್ರಮುಖ ಆರೋಗ್ಯ ಸೇವೆಯಲ್ಲಿ ಕೊಡುಗೆ: ಸ್ಥಳೀಯ ಆರೋಗ್ಯ ಸೇವೆಗಳ ಬಲವರ್ಧನೆ ಹಾಗೂ ರೋಗಿಗಳಿಗೆ ಉತ್ತಮ ಚಿಕಿತ್ಸೆ ವ್ಯವಸ್ಥೆಯನ್ನು ಒದಗಿಸುವಲ್ಲಿ ಮಹತ್ವದ ಪಾತ್ರ ನರ್ಸಿಂಗ್ ಶಿಕ್ಷಣದಲ್ಲಿ ಸೇವೆ: ರಾಜ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳನ್ನು ತರಬೇತಿ ನೀಡಿ, ಭವಿಷ್ಯದ ಆರೋಗ್ಯ ಸೇವಕರನ್ನು ರೂಪಿಸುವಲ್ಲಿ ವಿಶೇಷ ಶ್ರಮ ವೈದ್ಯಕೀಯ ಸಂಶೋಧನೆ: ವೈದ್ಯಕೀಯ ಕ್ಷೇತ್ರದಲ್ಲಿ ನವೀನತೆ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ಕೊಡುಗೆ ನೀಡಿ, ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ.ಈ ಪ್ರಶಸ್ತಿ ಡಾ. ಪ್ರಕಾಶ ಕೊಡ್ಲಿ ಅವರ ನಿಸ್ವಾರ್ಥ ಸೇವೆ, ಪರಿಶ್ರಮ ಮತ್ತು ಸಮಾಜಮುಖಿ ಮನೋಭಾವಕ್ಕೆ ಸಿಕ್ಕ ಮಾನ್ಯತೆಯಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 