ಡಾ.ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಒತ್ತಾಯ
ಶಿಗ್ಗಾವಿ 13: ಕರ್ನಾಟಕ ದಲ್ಲಿ ಖಾಸಗಿ ಸಂಸ್ಥೆ ಹಾಗೂ ಐಟಿಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ 80 ಪಸರ್ೆಂಟ್ ಉದ್ಯೋಗ ಕಲ್ಪಿಸಲು ಡಾಕ್ಟರ ಸರೋಜಿನಿ ಮಹಿಷಿಯವರ ವರದಿ ಸರಿಯಾಗಿ 35 ವರ್ಷ ಕಳೆದರೂ ಇನ್ನೂ ಅನುಷ್ಠಾನಕ್ಕೆ ತರದೇ ಎಲ್ಲ ಸಕರ್ಾರಗಳು ಕನ್ನಡಿಗರಿಗೆ ಅನ್ಯಾಯ ಮಾಡುತ್ತಾ ಬಂದಿವೆ ಎಂದು ಬೆಂಗಳೂರಿನ ರಾಮ ಭಕ್ತ ಮಂಜುನಾಥ್ ಅವರು ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದ ಬಳಿ ಬೆಂಗಳೂರಿನಿಂದ ಪಾದಯಾತ್ರೆ ಮೂಲಕ ಆಗಮಿಸಿ ವರದಿಗಾರರೊಂದಿಂಗೆ ಮಾತನಾಡಿದ ಅವರು, ಡಾ. ಸರೋಜಿನಿ ಮಹಿಷಿಯವರ ವರದಿಯನ್ನು ಕೂಡಲೇ ಅನುಷ್ಠಾನ ತರಬೇಕು ಎಂದು ಆಗ್ರಹಿಸಿ ತಮ್ಮ ನೇತೃತ್ವದಲ್ಲಿ ಬೆಂಗಳೂರಿನ ಹೂಡಿ ಗ್ರಾಮದಿಂದ ಬೆಳಗಾವಿಯ ಸುವರ್ಣಸೌಧದ ವರೆಗೂ ಸುಮಾರು 520 ಕೀ ಮಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ, ಫೆ. 2 ರಂದು ಬೆಂಗಳೂರಿನಿಂದ ಪ್ರಾರಂಭವಾದ ಈ ಪಾದಯಾತ್ರೆ ದಿನಕ್ಕೆ 40 ರಿಂದ 45 ಕೀ ಮೀ ಕಾಲ್ನಡಿಗೆಯಲ್ಲಿಯೇ ಸಾಗಲಿದೆ ಆದರಿಂದ ಈ ಹೋರಾಟಕ್ಕೆ ಬೆಂಬಲಿಸಲು ಶುಲ್ಕರಹಿತ 9319464683 ಸಂಖ್ಯೆಗೆ ಕರೆ ಮಾಡುವ ಮೂಲಕ ಬೆಂಬಲಿಸಲು ತಿಳಿಸಿ ಹುಬ್ಬಳ್ಳಿಯತ್ತ ಪಾದಯಾತ್ರೆಯನ್ನು ಮುಂದುವರೆಸಿದರು.
ಪಾದಯಾತ್ರೆಯಲ್ಲಿ ಕರವೇ ಗಜಸೇನೆಯ ರಾಜ್ಯ ಉಪಾಧ್ಯಕ್ಷ ದೀಲಿಪ್ ಕುಮಾರ, ಕಾರ್ಯಕರ್ತರಾದ ಆಂಜಿ, ಮುನಿಕೃಷ್ಣ, ದಿನೇಶ, ಲಿಂಗರಾಜ ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 