ಡಾ.ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಒತ್ತಾಯ
ಶಿಗ್ಗಾವಿ 13: ಕರ್ನಾಟಕ ದಲ್ಲಿ ಖಾಸಗಿ ಸಂಸ್ಥೆ ಹಾಗೂ ಐಟಿಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ 80 ಪಸರ್ೆಂಟ್ ಉದ್ಯೋಗ ಕಲ್ಪಿಸಲು ಡಾಕ್ಟರ ಸರೋಜಿನಿ ಮಹಿಷಿಯವರ ವರದಿ ಸರಿಯಾಗಿ 35 ವರ್ಷ ಕಳೆದರೂ ಇನ್ನೂ ಅನುಷ್ಠಾನಕ್ಕೆ ತರದೇ ಎಲ್ಲ ಸಕರ್ಾರಗಳು ಕನ್ನಡಿಗರಿಗೆ ಅನ್ಯಾಯ ಮಾಡುತ್ತಾ ಬಂದಿವೆ ಎಂದು ಬೆಂಗಳೂರಿನ ರಾಮ ಭಕ್ತ ಮಂಜುನಾಥ್ ಅವರು ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದ ಬಳಿ ಬೆಂಗಳೂರಿನಿಂದ ಪಾದಯಾತ್ರೆ ಮೂಲಕ ಆಗಮಿಸಿ ವರದಿಗಾರರೊಂದಿಂಗೆ ಮಾತನಾಡಿದ ಅವರು, ಡಾ. ಸರೋಜಿನಿ ಮಹಿಷಿಯವರ ವರದಿಯನ್ನು ಕೂಡಲೇ ಅನುಷ್ಠಾನ ತರಬೇಕು ಎಂದು ಆಗ್ರಹಿಸಿ ತಮ್ಮ ನೇತೃತ್ವದಲ್ಲಿ ಬೆಂಗಳೂರಿನ ಹೂಡಿ ಗ್ರಾಮದಿಂದ ಬೆಳಗಾವಿಯ ಸುವರ್ಣಸೌಧದ ವರೆಗೂ ಸುಮಾರು 520 ಕೀ ಮಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ, ಫೆ. 2 ರಂದು ಬೆಂಗಳೂರಿನಿಂದ ಪ್ರಾರಂಭವಾದ ಈ ಪಾದಯಾತ್ರೆ ದಿನಕ್ಕೆ 40 ರಿಂದ 45 ಕೀ ಮೀ ಕಾಲ್ನಡಿಗೆಯಲ್ಲಿಯೇ ಸಾಗಲಿದೆ ಆದರಿಂದ ಈ ಹೋರಾಟಕ್ಕೆ ಬೆಂಬಲಿಸಲು ಶುಲ್ಕರಹಿತ 9319464683 ಸಂಖ್ಯೆಗೆ ಕರೆ ಮಾಡುವ ಮೂಲಕ ಬೆಂಬಲಿಸಲು ತಿಳಿಸಿ ಹುಬ್ಬಳ್ಳಿಯತ್ತ ಪಾದಯಾತ್ರೆಯನ್ನು ಮುಂದುವರೆಸಿದರು.
ಪಾದಯಾತ್ರೆಯಲ್ಲಿ ಕರವೇ ಗಜಸೇನೆಯ ರಾಜ್ಯ ಉಪಾಧ್ಯಕ್ಷ ದೀಲಿಪ್ ಕುಮಾರ, ಕಾರ್ಯಕರ್ತರಾದ ಆಂಜಿ, ಮುನಿಕೃಷ್ಣ, ದಿನೇಶ, ಲಿಂಗರಾಜ ಮುಂತಾದವರು ಇದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 