ಡಾ. ಸಿದ್ದರಾಮಯ್ಯನವರಿಗೆ ಸಂಗೀತ ರತ್ನ ಪ್ರಶಸ್ತಿ
Dr. Siddaramaiah receives Sangeetha Ratna Award
ಬಾಗಲಕೋಟೆ 30: ಬಿ.ವಿ.ವಿ. ಸಂಘದ ಕಲಾ ಮಹಾವಿದ್ಯಾಲಯದ ವಿಶ್ರಾಂತ ಪ್ರಾಧ್ಯಪಕ ಮತ್ತು ನಾಡಿನ ಹಿಂದೂಸ್ತಾನಿ ಸಂಗೀತಗಾರರಾದ ಡಾ. ಪಂಡಿತ ಸಿದ್ದರಾಮಯ್ಯ ಮಠಪತಿ (ರುದ್ರಮಠ) ಗೊರಟಾ ಅವರಿಗೆ ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಸುಕ್ಷೇತ್ರ ಹಾರಕೊಡದ ಹಿರೇಮಠ ಚೆನ್ನಬಸವೇಶ್ವರ ಸಂಸ್ಥಾನವು ಕಲ್ಯಾಣ ಕರ್ನಾಟಕ ಸಂಗೀತ ರತ್ನ ಪ್ರಶಸ್ತಿ ನೀಡಿದೆ.
ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದನ್ನು ಒಳಗೊಂಡಿದೆ. ಡಾ. ಪಂಡಿತ ಸಿದ್ದರಾಮಯ್ಯ ಮಠಪತಿ ಅವರು ಕಳೆದ ಮೂವತ್ತು ವರ್ಷಗಳಿಂದ ಸಂಗೀತದ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕಾರ್ಯಕ್ರಮವನ್ನು ನೀಡಿದ್ದಾರೆ. ಜ.31ರಂದು ಹಾರಕೊಡದಲ್ಲಿ ನಡೆಯುವ ಕಲ್ಯಾಣ ಕರ್ನಾಟಕದ 10ನೇ ಸಂಗೀತ ದಿನಾಚಾರಣೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸುವರು. ಪ್ರಶಸ್ತಿ ಪುರಸ್ಕೃತರಿಗೆ ಸಂಗೀತಗಾರರು, ಶಿಷ್ಯರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 