ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಸರಳವಾಗಿರಲಿ: ಶ್ರೀನಿವಾಸ್ ಪ್ರಸಾದ್
ಮೈಸೂರು,
ಏ.13, ಕೊರೊನಾ ಸೋಂಕು ತಡೆಗಟ್ಟಲು ಲಾಕ್ ಡೌನ್ ಜಾರಿಯಾಗಿದ್ದರಿಂದ ಸಂವಿಧಾನ
ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಜಯಂತಿ ಎಲ್ಲರೂ ಸರಳವಾಗಿ ಆಚರಿಸಬೇಕು ಎಂದು
ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಜನರಲ್ಲಿ ಮನವಿ ಮಾಡಿದ್ದಾರೆ.ಸೋಮವಾರ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏ.14ರಂದು ಡಾ.ಬಿ ಆರ್ ಅಂಬೇಡ್ಕರ್
ಜಯಂತಿ ಪ್ರಯುಕ್ತ ಯಾವುದೇ ಜಾಥಾ ಮಾಡಬಾರದು. ಹೆಚ್ಚು ಜನ ಸೇರುವಂತಿಲ್ಲ. ಮನೆಯಲ್ಲೇ
ಎಲ್ಲರೂ ಸರಳವಾಗಿ ಆಚರಿಸುವ ಮೂಲಕ ಅಂಬೇಡ್ಕರ್ ಅವರ ಕನಸನ್ನು ಈಡೇರುವ ಹಾಗೇ ಮಾಡೋಣ
ಎಂದು ಜನರಲ್ಲಿ ಮನವಿ ಮಾಡಿದ್ದಾರೆ.ಇನ್ನು, ಜುಬಿಲೆಂಟ್ ಕಾರ್ಖಾನೆಯಿಂದಲೇ
ಕೊರೊನಾ ಸೋಂಕು ಹೆಚ್ಚಾಗಿ ದೃಢಪಡುತ್ತಿದ್ದು, ಇದಕ್ಕೆ ಮೂಲ ಕಾರಣ ಏನು ಎಂಬುದು
ಗೊತ್ತಾಗಬೇಕಿದೆ. ಜಿಲ್ಲಾಡಳಿತ, ಸಚಿವರು ಈಗಾಗಲೇ ತನಿಖೆಗೆ ಮುಂದಾಗಿದ್ದಾರೆ.
ಶೀಘ್ರದಲ್ಲೇ ಈ ಬಗ್ಗೆ ಸಂಪೂರ್ಣ ಮಾಹಿತಿ ಹೊರಬರಲಿದೆ ಎಂದರು. ತನಿಖೆಯ ವರದಿ ಬಂದ ನಂತರ ಜುಬಿಲೆಂಟ್ ಫ್ಯಾಕ್ಟರಿ ತೆರೆಯೋಬೇಕೋ, ಬೇಡವೋ ಎಂಬುದನ್ನು ತೀರ್ಮಾನಿಸಲಾಗುವುದು ಎಂದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 