ಧಾರವಾಡ ರುಡ್ಸೆಟ್ ಸಂಸ್ಥೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ
Dr.D.Virendra Heggade, the deacon of Dharmasthala, visited the Dharwad Rudset Institute
ಧಾರವಾಡ 21: ರುಡ್ಸೆಟ್ ಸಂಸ್ಥೆ, ಗಾಂಧಿನಗರ, ಧಾರವಾಡದಲ್ಲಿ ಜರುಗುತ್ತಿರುವ ಮೃದು ಗೊಂಬೆ ತಯಾರಿಕೆ ತರಬೇತಿಯಲ್ಲಿ ಶಿಬಿರಾರ್ಥಿಗಳು ತಯಾರಿಸಿದ ಮೃದು ಗೊಂಬೆಗಳನ್ನು ರುಡ್ಸೆಟ್ ಸಂಸ್ಥೆಯ ಅಧ್ಯಕ್ಷರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವೀಕ್ಷಿಸಿ, ಶಿಬಿರಾರ್ಥಿಗಳಿಗೆ ಮೃದು ಗೊಂಬೆ ತಯಾರಿಕೆ ಉದ್ಯಮಕ್ಕೆ ತುಂಬಾ ಬೇಡಿಕೆ ಇದ್ದು, ಭಾರತದಿಂದ ವಿದೇಶಕ್ಕೆ ಈ ಮೃದು ಗೊಂಬೆ ರಫ್ತಾಗುತ್ತಿದ್ದು ತಾವೂ ಸಹ ಉತ್ತಮ ರೀತಿಯಲ್ಲಿ ಉದ್ಯೋಗ ಮಾಡಿ ಜೊತೆಗೆ ಉದ್ಯಮದಲ್ಲಿ ಗುಣಮಟ್ಟವನ್ನು ಕಾಯ್ದುಕೊಂಡು ಹೋದರೆ ಉದ್ಯಮದಲ್ಲಿ ಲಾಭವನ್ನು ಮಾಡಿಕೊಳ್ಳಬಹುದೆಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಈ ಉದ್ಯೋಗದ ಜೊತೆ ಪರಾ್ಯಯ ಉದ್ಯೋಗಗಳಾದ ಟೇಲರಿಂಗ, ಬ್ಯೂಟಿ ಪಾರ್ಲರ, ಕೃತಕ ಆಭರಣ ತಯಾರಿಕೆ ಇಂಥ ಉದ್ಯೋಗಗಳನ್ನು ಮಾಡಿ ಆದಾಯ ಮಾಡಿಕೊಂಡು ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಿ ಎಂದು ಶಿಬಿರಾರ್ಥಿಗಳಿಗೆ ಕರೆಕೊಟ್ಟರು.
ಈ ಸಂದರ್ಭದಲ್ಲಿ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಜೀವನಧರಕುಮಾರ, ಎಸ್ ಡಿ ಎಮ್ ಇಂಜನೀಯರಿಂಗ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ ಚಕ್ರಸಾಲಿ, ರುಡ್ಸೆಟ್ ಸಂಸ್ಥೆಯ ಸಿಬ್ಬಂದಿಗಳಾದ ಜಗದೀಶ ಪೂಜಾರ, ಚನ್ನಪ್ಪ ದೇವಗಿರಿ, ಮಹೇಶ ಗೌಡರ, ಚಂದ್ರು ಕುರಕುಂದಿ, ತರಬೇತುದಾರರಾದ ರಶ್ಮೀ ಭಟ್ ಹಾಗೂ ಜಗದೀಶ ಬಾವಿಕಟ್ಟಿ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 