ಧಾರವಾಡ ರುಡ್ಸೆಟ್ ಸಂಸ್ಥೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ
Dr.D.Virendra Heggade, the deacon of Dharmasthala, visited the Dharwad Rudset Institute
ಧಾರವಾಡ 21: ರುಡ್ಸೆಟ್ ಸಂಸ್ಥೆ, ಗಾಂಧಿನಗರ, ಧಾರವಾಡದಲ್ಲಿ ಜರುಗುತ್ತಿರುವ ಮೃದು ಗೊಂಬೆ ತಯಾರಿಕೆ ತರಬೇತಿಯಲ್ಲಿ ಶಿಬಿರಾರ್ಥಿಗಳು ತಯಾರಿಸಿದ ಮೃದು ಗೊಂಬೆಗಳನ್ನು ರುಡ್ಸೆಟ್ ಸಂಸ್ಥೆಯ ಅಧ್ಯಕ್ಷರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವೀಕ್ಷಿಸಿ, ಶಿಬಿರಾರ್ಥಿಗಳಿಗೆ ಮೃದು ಗೊಂಬೆ ತಯಾರಿಕೆ ಉದ್ಯಮಕ್ಕೆ ತುಂಬಾ ಬೇಡಿಕೆ ಇದ್ದು, ಭಾರತದಿಂದ ವಿದೇಶಕ್ಕೆ ಈ ಮೃದು ಗೊಂಬೆ ರಫ್ತಾಗುತ್ತಿದ್ದು ತಾವೂ ಸಹ ಉತ್ತಮ ರೀತಿಯಲ್ಲಿ ಉದ್ಯೋಗ ಮಾಡಿ ಜೊತೆಗೆ ಉದ್ಯಮದಲ್ಲಿ ಗುಣಮಟ್ಟವನ್ನು ಕಾಯ್ದುಕೊಂಡು ಹೋದರೆ ಉದ್ಯಮದಲ್ಲಿ ಲಾಭವನ್ನು ಮಾಡಿಕೊಳ್ಳಬಹುದೆಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಈ ಉದ್ಯೋಗದ ಜೊತೆ ಪರಾ್ಯಯ ಉದ್ಯೋಗಗಳಾದ ಟೇಲರಿಂಗ, ಬ್ಯೂಟಿ ಪಾರ್ಲರ, ಕೃತಕ ಆಭರಣ ತಯಾರಿಕೆ ಇಂಥ ಉದ್ಯೋಗಗಳನ್ನು ಮಾಡಿ ಆದಾಯ ಮಾಡಿಕೊಂಡು ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಿ ಎಂದು ಶಿಬಿರಾರ್ಥಿಗಳಿಗೆ ಕರೆಕೊಟ್ಟರು.
ಈ ಸಂದರ್ಭದಲ್ಲಿ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಜೀವನಧರಕುಮಾರ, ಎಸ್ ಡಿ ಎಮ್ ಇಂಜನೀಯರಿಂಗ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ ಚಕ್ರಸಾಲಿ, ರುಡ್ಸೆಟ್ ಸಂಸ್ಥೆಯ ಸಿಬ್ಬಂದಿಗಳಾದ ಜಗದೀಶ ಪೂಜಾರ, ಚನ್ನಪ್ಪ ದೇವಗಿರಿ, ಮಹೇಶ ಗೌಡರ, ಚಂದ್ರು ಕುರಕುಂದಿ, ತರಬೇತುದಾರರಾದ ರಶ್ಮೀ ಭಟ್ ಹಾಗೂ ಜಗದೀಶ ಬಾವಿಕಟ್ಟಿ ಹಾಜರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 