ಕೃಷಿ ವಿವಿ ನೇಮಕಾತಿಗೆ ಏಕರೂಪ ನಿಯಮ ರಚನೆಯ ಕರಡು ಅಂತಿಮ: ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟನೆ
ಬೆಂಗಳೂರು, ಮಾ .19 ರಾಜ್ಯದಲ್ಲಿರುವ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಬೋಧಕ, ಬೋಧಕೇತರ, ಹಣಕಾಸಿನ ಸೌಕರ್ಯ ಮತ್ತು ಸೇವಾ ನಿಯಮಕ್ಕೆ ಏಕರೂಪ ಕಾಯಿದೆ ನಿಯಮಕ್ಕೆ ಸಂಬಂಧಿಸಿದ ಏಕರೂಪ ಪರಿನಿಯಮ ರಚನೆಯ ಕುರಿತು ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ನಡೆಸಿ ಕರಡನ್ನು ಅಂತಿಮಗೊಳಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.ವಿಧಾನ ಪರಿಷತ್ತಿನಲ್ಲಿ ಎಂ.ಸಿ.ವೇಣುಗೋಪಾಲ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ ವ್ಯವಸ್ಥಾಪನಾ ಮಂಡಳಿಗಳ ಅನುಮೋದನೆ ಪಡೆಯಲಾಗಿದೆ. ಕರಡು ಏಕರೂಪ ಪರಿನಿಯಮಕ್ಕೆ ಆರ್ಥಿಕ ಇಲಾಖೆ, ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆ(ಸೇವಾ ನಿಯಮಗಳು) ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆಗಳ ಅಭಿಪ್ರಾಯವನ್ನು ಕೋರಲಾಗಿದ್ದು, ಈ ಇಲಾಖೆಗಳು ಅಭಿಪ್ರಾಯಗಳು ನೀಡಿದ ಬಳಿಕ ರಾಜ್ಯಪಾಲರ ಅನುಮೋದನೆ ಪಡೆದು ಶೀಘ್ರವಾಗಿ ಏಕರೂಪ ಕಾಯಿದೆಯನ್ನು ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು. ಏಕರೂಪ ಪರಿನಿಯಮ ರಚನೆಯ ಪ್ರಕ್ರಿಯೆಯು ಹಲವು ಇಲಾಖೆಗಳೊಂದಿಗೆ ಸಮಾಲೋಚಿಸುವ ಹಾಗೂ ಹಲವು ಹಂತರ ಚರ್ಚೆಗಳನ್ನೊಳಗೊಂಡಿರುವುದರಿಂದ ಇದಕ್ಕೆ ಹೆಚ್ಚಿನ ಸಮಯದ ಅಗತ್ಯವಿರುತ್ತದೆ ಎಂದು ಸಚಿವರು ಹೇಳಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 