ಸಮಾಜ ಪರಿವರ್ತನೆಗೆ ನಾಟಕಗಳು ಅಗತ್ಯ: ಅರುಣಿ ಸುರೇಶ್
Dramas are necessary for social transformation: Aruni Suresh
ಹೂವಿನಹಡಗಲಿ 10: ನಾಟಕಗಳು ಕೇವಲ ಮನರಂಜನೆ ನೀಡುವ ರಂಗ ಕಲೆಯಾಗದೇ ಸಮಾಜದ ಅಂಕುಡೊಂಕು ತಿದ್ದುವ ಸಾಧನವಾಗಿದೆ ಎಂದು ಶಾಸಕರ ಆಪ್ತ ಸಹಾಯಕ ಅರುಣಿ ಸುರೇಶ್ ಹೇಳಿದರು.
ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಶ್ರೀ ಕಂಠಿ ಬಸವೇಶ್ವರ ರಥೋತ್ಸವ ಜಾತ್ರಾ ನಿಮಿತ್ತ ಸ್ಥಳೀಯ ಕಲಾವಿದರಿಂದ "ಕಲಿತ ರೈತನ ಕಣ್ಣೀರು " ಸುಂದರ ಸಾಮಾಜಿಕ ನಾಟಕ ದಲ್ಲಿ ಭಾಗವಹಿಸಿ ಮಾತನಾಡಿದ ಅವರುಹಬ್ಬ ಹರಿದಿನ, ಜಾತ್ರೆಗಳ ಸಂದರ್ಭದಲ್ಲಿ ಪೂರ್ವಕಾಲದಿಂದ ಗ್ರಾಮೀಣ ಪ್ರದೇಶದಲ್ಲಿ ಅಭಿನಯಿಸಿರುವ ಸಾಮಾಜಿಕ, ಪೌರಾಣಿಕ, ಐತಿಹಾಸಿಕ ನಾಟಕಗಳು ಸಮಾಜದ ಪರಿವರ್ತನೆಗೆ ಸಂದೇಶ ನೀಡುವ ಸಂವಹನವಾಗಿವೆ. ರಂಗ ಕಲೆ ಅತ್ಯಂತ ಗಟ್ಟಿ ಕಲೆಯಾಗಿದೆ. ಟಿವಿ, ಸಿನೆಮಾ, ಧಾರವಾಹಿಗಳ ಅಬ್ಬರದ ಮಧ್ಯೆಯೂ ರಂಗ ಕಲೆಯನ್ನು ಪ್ರೋತ್ಸಾಹಿಸುತ್ತಾರೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅದ್ಯಕ್ಷ ವಿ.ಬಿ.ಜಗದೀಶ ಮಾತನಾಡಿ ಇಂದಿನ ಬದುಕಿನ ಒತ್ತಡದಲ್ಲಿ ನಾಟಕಗಳು ಮನೋರಂಜನೆ ನೀಡುತ್ತೇವೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದಬಿಜೆಪಿ ಮಂಡಲ ಅದ್ಯಕ್ಷ ಹಣ್ಣಿ ಶಶಿಧರ ಮಾತನಾಡಿ ನಾಟಕಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮಾಧ್ಯಮವಾಗಿದೆ ಎಂದರು.ನಾಟಕ ವ್ಯವಸ್ಥಾಪಕ ಜಿ.ವಿನಾಯಕ. ಗ್ರಾ.ಪಂ.ಮಾಜಿ ಅಧ್ಯಕ್ಷ ಕಂಠಿವೀರೇಶ. ಅಂಗಡಿ ಬಸವರಾಜ. ವಿ.ಬಿ.ಮಲ್ಲಿಕೇಶ್. ಚಂದ್ರ್ಪ.ಜಿ. ಮಲ್ಲಪ್ಪ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 