ಸಮಾಜ ಪರಿವರ್ತನೆಗೆ ನಾಟಕಗಳು ಅಗತ್ಯ: ಮಹಾಂತೇಶ ಗೋಡಿ
Dramas are necessary for social transformation: Mahantesh Godi
ಯರಗಟ್ಟಿ, 25 ; ಸಮಾಜ ಪರಿವರ್ತನೆಗೆ ನಾಟಕಗಳು ಅಗತ್ಯ’ ಎಂದು ಸತ್ತಿಗೇರಿ ಪಿಕೆಪಿಎಸ್ ಅಧ್ಯಕ್ಷ ಮಹಾಂತೇಶ ಗೋಡಿ ಅಭಿಪ್ರಾಯಪಟ್ಟರು.
ಸಮೀಪದ ಇಟ್ನಾಳ ಗ್ರಾಮದ ಬಸವೇಶ್ವರ ಜಾತ್ರಾ ನಿಮಿತ್ಯ ಬಸವ ಭವನದಲ್ಲಿ ಜರುಗಿದ ಮಾನವಂತರ ಮನೆತನ ಎಂಬ ಸಾಮಾಜಿಕ ನಾಟಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ದಶಕಗಳ ಹಿಂದೆ ಗ್ರಾಮೀಣ ಪ್ರದೇಶದಲ್ಲಿ ನಾಟಕ ಪ್ರದರ್ಶನಗಳು ನಡೆಯುತ್ತಿದ್ದವು. ಪ್ರದರ್ಶನಗಳ ಹಿಂದೆ ಸಮಾಜದ ಅಂಕುಡೊಂಕು ತಿದ್ದುವ ಉದ್ದೇಶ ಇರುತ್ತಿತ್ತು. ಬದಲಾದ ಕಾಲಘಟ್ಟದಲ್ಲಿ ಆ ಕೆಲಸವನ್ನು ಸಾಮಾಜಿಕ ಕಥಾಹಂದರ ಒಳಗೊಂಡ ನಾಟಕಗಳು ನಿಭಾಯಿಸಿದವು. ಆದರೆ ಇತ್ತೀಚಿನ ದಿನಗಳಲ್ಲಿ ನಿರ್ದಿಷ್ಟ ಜಾತಿ ಸೂಚಕ ಶೀರ್ಷಿಕೆಯನ್ನು ಒಳಗೊಂಡ ನಾಟಕಗಳು ಬರುತ್ತಿವೆ. ನಾಟಕಗಳು ಒಂದು ಜಾತಿಗೆ ಸೀಮಿತಗೊಂಡರೆ ಸಮಾಜಕ್ಕೆ ಒಳ್ಳೆಯ ಸಂದೇಶ ತಲುಪಿಸಲು ಸಾಧ್ಯವಾಗುವುದಿಲ್ಲ ಎಂಬುದನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದರು.
ಈ ವೇಳೆ ಪಂಚಮಸಾಲಿ ಮುಖಂಡ ಸಂಜುಕುಮಾರ ನವಲಗುಂದ, ಪಿಕೆಪಿ ಅಧ್ಯಕ್ಷ ವಿಠ್ಠಲ ಬಂಟನೂರ, ಮಾಜಿ ಗ್ರಾ. ಪಂ. ಅಧ್ಯಕ್ಷ ಗೌಡಪ್ಪ ಸವದತ್ತಿ, ಮಾಜಿ ಬಿಜೆಪಿ ಮಂಡಳ ಅಧ್ಯಕ್ಷ ಈರಣ್ಣಾ ಚಂದರಗಿ, ಗ್ರಾ. ಪಂ. ಬಂಗಾರೆವ್ವ ಮಾದರ, ಪಿಕೆಪಿಎಸ್ ಅಧ್ಯಕ್ಷ ಮಲ್ಲಿಕಾರ್ಜುನ ಯರಗಟ್ಟಿ, ಶಿವಾನಂದ ಕುಸಲಾಪೂರ, ಸಂಜು ಚಂದರಗಿ, ಬಸವರಾಜ ಪೂಜೇರಿ, ಸೋಮು ಹೊಸಳ್ಳಿ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 