ರಸ್ತೆ ಕಾಮಗಾರಿಗೆ ನಾಮದೇವ ಕಾಂಬಳೆ ಚಾಲನೆ
ಲೋಕದರ್ಶನ ವರದಿ
ರಾಯಬಾಗ 20: ತಾ.ಪಂ.ಅನುದಾನದಲ್ಲಿ ಮಂಜೂರಾದ ತಾಲೂಕಿನ ಹೊಸ ದಿಗ್ಗೇವಾಡಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಸಿಸಿ ರಸ್ತೆ, ಕೋಳಿ ಗಲ್ಲಿಯಲ್ಲಿ ಚರಂಡಿ ನಿರ್ಮಾಣ ಮತ್ತು ಮುಸ್ಲಿಂ ಸಮುದಾಯದ ಸ್ಮಶಾನ ಭೂಮಿಯಲ್ಲಿ ಹೈಮಾಸ್ ವಿದ್ಯುತ್ ದೀಪ ಅಳವಡಿಕೆ ಹಾಗೂ ಹಳೆ ದಿಗ್ಗೇವಾಡಿಯ ಬನ್ನಿಗಿಡದಿಂದ ಲಗಮಣ್ಣಾಜ್ಜ ಗುಡಿವರೆಗೆ ರಸ್ತೆ ಖಡೀಕರಣ ಕಾಮಗಾರಿಗಳಿಗೆ ತಾ.ಪಂ.ಸದಸ್ಯ ನಾಮದೇವ ಕಾಂಬಳೆ ಬುಧವಾರದಂದು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ತಾ.ಪಂ.ಯಲ್ಲಿನ ಅನುದಾನದಲ್ಲಿ ದಿಗ್ಗೇವಾಡಿ ತಾ.ಪಂ.ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಜಿ.ಪಂ.ಸದಸ್ಯೆ ಜಯಶ್ರೀ ಮೊಹಿತೆ, ಮಹಾದೇವ ಗಂಗಾಯಿ, ದಾಮೋದ ಜಮಾದಾರ, ಕೇದಾರಿ ಫುಂಡಿಪಲ್ಲೆ, ಮಲ್ಲಯ್ಯ ಸ್ವಾಮಿ, ದೀಪಕ ಜೋಡಟ್ಟಿ, ಗುಂಡು ಕಾಂಬಳೆ, ಸುಭಾಷ ಚೌಗಲಾ, ರಮೇಶ ಬೆಳಗಲಿ, ಗಂಗಾಧರ ಕಾಂಬಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 