ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ 'ರೋಟಾ ವೈರಸ್ ಲಸಿಕೆ'ಗೆ ಚಾಲನೆ
ಬೆಂಗಳೂರು ಆಗಸ್ಟ್ 25 ಮಾರಣಾಂತಿಕ ಅತಿಸಾರ ಭೇದಿ ಖಾಯಿಲೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಹೊರತಂದಿರುವ ರೋಟಾ ವೈರಸ್ ಲಸಿಕೆಯನ್ನು ಸಾಂಕೇತಿಕವಾಗಿ ಶಿಶುಗಳಿಗೆ ಲಸಿಕಾ ಹನಿ ನೀಡುವ ಮೂಲಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪರಿಚಯಿಸಿದರು
ಮಾಹಿತಿಗಳ ಪ್ರಕಾರ ಭಾರತದಲ್ಲಿ ಪ್ರತಿ ವರ್ಷ 5 ವರ್ಷದೊಳಗಿನ 32.7 ಲಕ್ಷ ಮಕ್ಕಳು ಅತಿಸಾರ ಭೇದಿಯಿಂದ ಬಳಲುತ್ತಾರೆ. ಇದರಲ್ಲಿ 78ಸಾವಿರ ಮಕ್ಕಳು ಸಾವಿಗಿಡಾಗುತ್ತಾರೆ. ಈ ಮಾರಣಾಂತಿಕ ಖಾಯಿಲೆಗೆ ಉತ್ತರವಾಗಿ ಆರೋಗ್ಯ ಇಲಾಖೆ ರೋಟಾ ವೈರಸ್ ಲಸಿಕೆಯನ್ನು ಪರಿಚಯಿಸುತ್ತಿದೆ. ಈ ಲಸಿಕೆಯನ್ನು 6, 10 ಹಾಗೂ 14 ವಾರಗಳ ಶಿಶುಗಳಿಗೆ ನೀಡಲಾಗುವುದು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಆರೋಗ್ಯ ಇಲಾಖೆಯ ಈ ಅಭಿಯಾನ ಶ್ಲಾಘನೀಯ. ಸರಿಯಾದ ಸಮಯದಲ್ಲಿ ಮಕ್ಕಳಿಗೆ ಈ ಲಸಿಕೆ ನೀಡಿ ಸಾವಿನ ಪ್ರಮಾಣವನ್ನು ಕಡಿಮೆ ಮಾಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದಶರ್ಿಗಳಾದ ಜಾವೇದ್ ಅಕ್ತರ್, ಆಯುಕ್ತರಾದ ಪಂಕಜ್ ಕುಮಾರ್ ಪಾಂಡೆ, ಅಭಿಯಾನ ನಿದರ್ೆಶಕರಾದ ಡಿ. ಎಸ್. ರಮೇಶ್ ಮತ್ತಿತರ ಅಧಿಕಾರಿಗಳು, ವೈದ್ಯರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 