ರಾಮಯ್ಯ ಕಾಲೋನಿಯಲ್ಲಿನ ಸಿ.ಸಿ ರಸ್ತೆ ಕಾಮಗಾರಿಗೆ ಚಾಲನೆ
ಬಳ್ಳಾರಿ,ಮೇ 29: ನಗರದ ರಾಮಯ್ಯ ಕಾಲೋನಿಯಲ್ಲಿನ ಜಿಲ್ಲಾ ಖನಿಜ ನಿಧಿ ಅಡಿ ಸಿ.ಸಿ ರಸ್ತೆ ಕಾಮಗಾರಿಯ ಭೂಮಿಪೂಜೆಯನ್ನು ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಹಾಗೂ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಮ್ಮೂರ ಶೇಖರ್ ಅವರು ಶುಕ್ರವಾರ ಬೆಳಗ್ಗೆ ನೆರವೇರಿಸಿದರು.
ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಶಾಸಕ ಸೋಮಶೇಖರ ರೆಡ್ಡಿ ಅವರು ಈ ಸಿಸಿ ರಸ್ತೆ ಕಾಮಗಾರಿಯು ಡಿ.ಎಂ.ಎಫ್ ಅನುದಾನದಡಿಯಲ್ಲಿ ಅನುಮೋದನೆಗೊಂಡಿದ್ದು, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬುಡಾ ಆಯುಕ್ತ ಈರಪ್ಪ ಬಿರಾದಾರ, ಮುಖಂಡರಾದ ವೀರಶೇಖರ ರೆಡ್ಡಿ, ಶ್ರೀನಿವಾಸ್ ಮೋತ್ಕರ್ ರೆಡ್ಡಿ, ಕಿಟ್ಟು, ಬುಡಾ ಎಇಇ ಜಿ.ಕೆ.ರವಿಶಂಕರ್ ಸೇರಿದಂತೆ ರಾಮಯ್ಯ ಕಾಲೋನಿ ನಿವಾಸಿಗಳು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 