ರಾಮಯ್ಯ ಕಾಲೋನಿಯಲ್ಲಿನ ಸಿ.ಸಿ ರಸ್ತೆ ಕಾಮಗಾರಿಗೆ ಚಾಲನೆ
ಬಳ್ಳಾರಿ,ಮೇ 29: ನಗರದ ರಾಮಯ್ಯ ಕಾಲೋನಿಯಲ್ಲಿನ ಜಿಲ್ಲಾ ಖನಿಜ ನಿಧಿ ಅಡಿ ಸಿ.ಸಿ ರಸ್ತೆ ಕಾಮಗಾರಿಯ ಭೂಮಿಪೂಜೆಯನ್ನು ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಹಾಗೂ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಮ್ಮೂರ ಶೇಖರ್ ಅವರು ಶುಕ್ರವಾರ ಬೆಳಗ್ಗೆ ನೆರವೇರಿಸಿದರು.
ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಶಾಸಕ ಸೋಮಶೇಖರ ರೆಡ್ಡಿ ಅವರು ಈ ಸಿಸಿ ರಸ್ತೆ ಕಾಮಗಾರಿಯು ಡಿ.ಎಂ.ಎಫ್ ಅನುದಾನದಡಿಯಲ್ಲಿ ಅನುಮೋದನೆಗೊಂಡಿದ್ದು, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬುಡಾ ಆಯುಕ್ತ ಈರಪ್ಪ ಬಿರಾದಾರ, ಮುಖಂಡರಾದ ವೀರಶೇಖರ ರೆಡ್ಡಿ, ಶ್ರೀನಿವಾಸ್ ಮೋತ್ಕರ್ ರೆಡ್ಡಿ, ಕಿಟ್ಟು, ಬುಡಾ ಎಇಇ ಜಿ.ಕೆ.ರವಿಶಂಕರ್ ಸೇರಿದಂತೆ ರಾಮಯ್ಯ ಕಾಲೋನಿ ನಿವಾಸಿಗಳು ಇದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 