ಡಿವೈಡರ್ನಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ
ಲೋಕದರ್ಶನವರದಿ
ಬ್ಯಾಡಗಿ೧೪: ಪ್ರತಿಯೊಬ್ಬರೂ ತಮ್ಮ ಮನೆ ಅಂಗಳದಲ್ಲಿ ಒಂದೊಂದು ಸಸಿಗಳನ್ನು ನೆಡುವ ಮೂಲಕ ಹಸಿರು ನಾಡನ್ನು ಉಳಿಸಿ ಬೆಳೆಸಲು ಮುಂದಾಗಬೇಕೆಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.
ಸ್ಥಳೀಯ ಪುರಸಭೆಯ ವತಿಯಿಂದ ಹಂಸಬಾವಿ ರಸ್ತೆಯಲ್ಲಿರುವ ಡಿವೈಡರ್ನಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಇತ್ತೀಚಿಗಿನ ದಿನಗಳಲ್ಲಿ ಕಾಂಕ್ರಿಟೀಕರಣದ ನೆಪದಲ್ಲಿ ಗಿಡಗಳನ್ನು ಕಡಿದು ಹಸಿರಿಕರಣವನ್ನು ನಾಶ ಮಾಡುತ್ತಿರುವುದು ವಿಪಯರ್ಾಸ, ಭೂಮಿಯು ತಂಪಾಗಿ ಇರಬೇಕೆಂದರೆ ಗಿಡಗಳನ್ನು ನೆಡುವ ಮೂಲಕ ಹಸಿರು ಬಣ್ಣದ ನಾಡನ್ನು ನಿಮರ್ಿಸಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು ಹಸಿರನ್ನು ಬೆಳೆಸಬೇಕೆಂದು ಮನವಿ ಮಾಡಿದರು.
ಪುರಸಭೆ ಆಡಳಿತಾಧಿಕಾರಿ ಡಾ. ದಿಲೀಷ್ ಸೇಶಿ ಮಾತನಾಡಿ, ಹಸಿರು ಎಂಬುದು ಪ್ರತಿಯೊಬ್ಬರಿಗೂ ಉಸಿರು ಇದ್ದಂತೆ, ಅಂತಹ ಉಸಿರಾಗಿರುವ ಹಸಿರನ್ನು ನೆಟ್ಟು ಬೆಳೆಸಿ ಉಳಿಸಲು ಮುಂದಾಗಬೇಕಾಗಿರುವುದು ತಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ವಿ.ಎಂ. ಪೂಜಾರ, ಸದಸ್ಯರಾದ ಬಸವರಾಜ ಛತ್ರದ, ಚಂದ್ರಪ್ಪ ಶೆಟ್ಟರ, ವಿನಾಯಕ ಹಿರೇಮಠ, ರಾಮಣ್ಣ ಕೋಡಿಹಳ್ಳಿ, ಶಿವರಾಜ ಅಂಗಡಿ, ಫಕ್ಕೀರಮ್ಮ ಚಲುವಾದಿ, ಕಲಾವತಿ ಬಡಿಗೇರ, ಮಂಜಪ್ಪ ಬಾಕರ್ಿ, ಮೆಹಬೂಬಸಾಬ್ ಅಗಸನಹಳ್ಳಿ ಮುಖಂಡರಾದ ಸುರೇಶ ಆಸಾದಿ, ವೀರೇಂದ್ರ ಶೆಟ್ಟರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 