ಸ್ವಾಗತ ಕಮಾನ ಕಾಮಗಾರಿಗೆ ಚಾಲನೆ
ಲೋಕದರ್ಶನ ವರದಿ
ಶೇಡಬಾಳ 17: ಶೇಡಬಾಳ ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ನಂತರ ಅಭಿವೃದ್ಧಿ ಕಾಮಗಾರಿಗಳು ಯುದ್ಯೊಪಾದಿಯಲ್ಲಿ ಸಾಗುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಕಾಗವಾಡ ಯುವ ಮುಖಂಡ ರಮೇಶ ಭರಮು ಚೌಗಲೆ ಹೇಳಿದರು.
ಅವರು ಬುಧವಾರ ದಿ. 15 ರಂದು ಶೇಡಬಾಳ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ವಾರ್ಡ ನಂ. 10 ರಲ್ಲಿ ಎಸ್.ಎಫ್.ಸಿ. ಯೋಜನೆಯಡಿ 6 ಲಕ್ಷ ರೂ. ವೆಚ್ಚದ ಅಂಬೇಡಕರ ಸ್ವಾಗತ ಕಮಾನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಶೇಡಬಾಳ ಪಟ್ಟಣ ಪಂಚಾಯತಿಯ ಪ್ರತಿ ವಾರ್ಡಗಳಲ್ಲಿ ರಸ್ತೆ, ಫ್ಲವರ್ ಬ್ಲಾಕ್ ಅಳವಡಿಕೆ, ಚರಂಡಿ, ಶೌಚಾಲಯ, ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಂದ ಸಾರ್ವಜನಿಕರ ಮೂಲಭೂತ ಬೇಡಿಕೆಗಳಿಗೆ ಸ್ಪಂದಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಇದೇ ರೀತಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಪಟ್ಟಣ ಪಂಚಾಯತಿ ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು.
ಈ ಸಮಯದಲ್ಲಿ ಕುಮಾರ ಬರಗಾಲೆ, ಭರತೇಶ ನಾಂದ್ರೆ, ಪ್ರಕಾಶ ಚೌಗಲೆ, ಉತ್ಕರ್ಷ ಪಾಟೀಲ, ಅಣ್ಣಾ ಅರವಾಡೆ, ಪಪಂ ಸದಸ್ಯರಾದ ವೃಷಭ ಚೌಗಲೆ, ಆಕಾಸನಿ ಶ್ರೀನಿವಾಸ ಕಾಂಬಳೆ, ಪ್ರಕಾಶ ಮಾಳಿ, ಶಾಂತಿನಾಥ ಮಾಲಗಾಂವೆ, ಶ್ರೀನಿವಾಸ ಕಾಂಬಳೆ, ಮೋಹನ ಘೋರ್ಪಡೆ, ಸಂಜು ಕಾಂಬಳೆ, ಅರವಿಂದ ಪಾಯಪ್ರಪ, ವಿಜಯ ಕಾಂಬಳೆ, ಶಾಂತಿನಾಥ ಮಾಳಗೆ, ಮಹಿಪತಿ ಢಾಲೆ, ಅನಿಲ ಢಾಲೆ ಸೇರಿದಂತೆ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 