ಬೈಲವಾಡ ಕೆರೆ ಪುನರುಜ್ಜೀವನ ಕಾರ್ಯಕ್ಕೆ ಚಾಲನೆ
ಬೆಳಗಾವಿ, 7: ಅನೇಕ ವರ್ಷಗಳಿಂದ ಹೂಳಿನಿಂದ ತುಂಬಿಕೊಂಡು ನೀರು ನಿಲ್ಲದಂತ ಪರಿಸ್ಥಿತಿ ನಿಮರ್ಾಣವಾಗಿದ್ದ ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದ ಸುಮಾರು 8 ಎಕರೆ ವಿಸ್ತೀರ್ಣದ ಕೆರೆಯ ಪರಿಸ್ಥಿಯನ್ನು ಗಮನಿಸಿದ ಬೆಳಗಾವಿಯ ಪ್ಯಾಸ ಫೌಂಡೇಶನ್ ಎಂಬ ಸೇವಾ ಸಂಸ್ಥೆಯು ಹೂಳೆತ್ತುವ ಕಾರ್ಯಕ್ಕೆ ಇಂದು ಚಾಲನೆ ನೀಡಿದೆ.
ಮಳೆಗಾಲದಲ್ಲಿ ಕೆರೆಯಲ್ಲಿ ನೀರು ಸಂಗ್ರವಾಗುತ್ತಿದ್ದರೂ ಕೂಡ ಜನೇವರಿಯ ಹೊತ್ತಿನ ಬೇಸಿಗೆಯಲ್ಲಿ ಕೆರೆಯು ಸಂಪೂರ್ಣವಾಗಿ ಒಣಗಿ ಹೋಗುತ್ತಿತ್ತು. ಇದರಿಂದ ಗ್ರಾಮದ ಜನರು ನೀರಿಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದರು. ಆದ್ದರಿಂದ ಅದರ ಪುನರುಜ್ಜೀವನಗೊಳಿಸಲು ಮುಂದೆ ಬಂದ ಪ್ಯಾಸ ಫೌಂಡೆಶನ್ ಕೆರೆಯನ್ನು ಸುಮಾರು 5 ಅಡಿಗಳ ಆಳ ಹೂಳೆತ್ತಿನೀರು ಸಂಗ್ರಹದ ಸಾಮಥ್ರ್ಯವನ್ನು ದ್ವಿಗುಣಗೊಳಿಸಲಿದೆ. ಇದರಿಂದ 7 ಸಾವಿರ ಜನಸಂಖ್ಯೆಯುಳ್ಳ ಗ್ರಾಮಕ್ಕೆ ನೀರು ಲಭಿಸಲಿದ್ದು, ಸುತ್ತಲಿನ ಪ್ರದೇಶದ ಅಂತರ್ಜಲ ಮಟ್ಟವು ಹೆಚ್ಚಲಿದೆ. ಹೂಳೆತ್ತುವ ಕಾರ್ಯವು ಮೇಗೆ ಕೊನೆಗೊಳ್ಳಲಿದೆ.
ಹೂಳೆತ್ತುವ ಕಾರ್ಯಕ್ಕೆ ಫೌಂಡೇಶನ್ನ ಅಧ್ಯಕ್ಷರಾದ ಡಾ. ಮಾಧವ ಪ್ರಭು ಅವರು ಪೂಜೆ ಸಲ್ಲಿಸಿ, ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಡಾ ಪ್ರೀತಿ ದೊಡವಾಡ ಕೋರೆ, ಅಭಿಮನ್ಯು ಡಾಗಾ, ಸತೀಶ ಲಾಡ, ದೇಪಕ ಓವುಲಕರ, ಗೋಪಾಲ ಗಾವಡೆ, ಮಹೇಶ ಬಾಗಿ, ಬೈಲವಾಡ ಗ್ರಾ.ಪಂ ಅಧ್ಯಕ್ಷೆ ದ್ರಾಕ್ಷಾಯಣಿ ಗಿರೆಪ್ಪನವರ, ಜಿ ಪಂ. ಸದಸ್ಯರಾದ ಅನಿಲ ಮಾಕಲಮರಡಿ, ತಾ ಪಂ. ಕಾರ್ಯಕಾರಿ ಅಧಿಕಾರಿ ಮುಲ್ಲಾ, ವಿ ಆರ್ ಗಿರೆಪ್ಪನವರ, ರಾಮನಗೌಡರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 