ಬೈಲವಾಡ ಕೆರೆ ಪುನರುಜ್ಜೀವನ ಕಾರ್ಯಕ್ಕೆ ಚಾಲನೆ
ಬೆಳಗಾವಿ, 7: ಅನೇಕ ವರ್ಷಗಳಿಂದ ಹೂಳಿನಿಂದ ತುಂಬಿಕೊಂಡು ನೀರು ನಿಲ್ಲದಂತ ಪರಿಸ್ಥಿತಿ ನಿಮರ್ಾಣವಾಗಿದ್ದ ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದ ಸುಮಾರು 8 ಎಕರೆ ವಿಸ್ತೀರ್ಣದ ಕೆರೆಯ ಪರಿಸ್ಥಿಯನ್ನು ಗಮನಿಸಿದ ಬೆಳಗಾವಿಯ ಪ್ಯಾಸ ಫೌಂಡೇಶನ್ ಎಂಬ ಸೇವಾ ಸಂಸ್ಥೆಯು ಹೂಳೆತ್ತುವ ಕಾರ್ಯಕ್ಕೆ ಇಂದು ಚಾಲನೆ ನೀಡಿದೆ.
ಮಳೆಗಾಲದಲ್ಲಿ ಕೆರೆಯಲ್ಲಿ ನೀರು ಸಂಗ್ರವಾಗುತ್ತಿದ್ದರೂ ಕೂಡ ಜನೇವರಿಯ ಹೊತ್ತಿನ ಬೇಸಿಗೆಯಲ್ಲಿ ಕೆರೆಯು ಸಂಪೂರ್ಣವಾಗಿ ಒಣಗಿ ಹೋಗುತ್ತಿತ್ತು. ಇದರಿಂದ ಗ್ರಾಮದ ಜನರು ನೀರಿಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದರು. ಆದ್ದರಿಂದ ಅದರ ಪುನರುಜ್ಜೀವನಗೊಳಿಸಲು ಮುಂದೆ ಬಂದ ಪ್ಯಾಸ ಫೌಂಡೆಶನ್ ಕೆರೆಯನ್ನು ಸುಮಾರು 5 ಅಡಿಗಳ ಆಳ ಹೂಳೆತ್ತಿನೀರು ಸಂಗ್ರಹದ ಸಾಮಥ್ರ್ಯವನ್ನು ದ್ವಿಗುಣಗೊಳಿಸಲಿದೆ. ಇದರಿಂದ 7 ಸಾವಿರ ಜನಸಂಖ್ಯೆಯುಳ್ಳ ಗ್ರಾಮಕ್ಕೆ ನೀರು ಲಭಿಸಲಿದ್ದು, ಸುತ್ತಲಿನ ಪ್ರದೇಶದ ಅಂತರ್ಜಲ ಮಟ್ಟವು ಹೆಚ್ಚಲಿದೆ. ಹೂಳೆತ್ತುವ ಕಾರ್ಯವು ಮೇಗೆ ಕೊನೆಗೊಳ್ಳಲಿದೆ.
ಹೂಳೆತ್ತುವ ಕಾರ್ಯಕ್ಕೆ ಫೌಂಡೇಶನ್ನ ಅಧ್ಯಕ್ಷರಾದ ಡಾ. ಮಾಧವ ಪ್ರಭು ಅವರು ಪೂಜೆ ಸಲ್ಲಿಸಿ, ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಡಾ ಪ್ರೀತಿ ದೊಡವಾಡ ಕೋರೆ, ಅಭಿಮನ್ಯು ಡಾಗಾ, ಸತೀಶ ಲಾಡ, ದೇಪಕ ಓವುಲಕರ, ಗೋಪಾಲ ಗಾವಡೆ, ಮಹೇಶ ಬಾಗಿ, ಬೈಲವಾಡ ಗ್ರಾ.ಪಂ ಅಧ್ಯಕ್ಷೆ ದ್ರಾಕ್ಷಾಯಣಿ ಗಿರೆಪ್ಪನವರ, ಜಿ ಪಂ. ಸದಸ್ಯರಾದ ಅನಿಲ ಮಾಕಲಮರಡಿ, ತಾ ಪಂ. ಕಾರ್ಯಕಾರಿ ಅಧಿಕಾರಿ ಮುಲ್ಲಾ, ವಿ ಆರ್ ಗಿರೆಪ್ಪನವರ, ರಾಮನಗೌಡರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 