ಕೊರೆಯುವ ಚಳಿ, ಸುರಿವ ಹಿಮ , ಜನಜೀವನ ತತ್ತರ .
ನವದೆಹಲಿ, ಡಿಸೆಂಬರ್ 21 ಉತ್ತರ ಭಾರತದಲ್ಲಿ ಮೈ ಕೊರೆಯುವ ಚಳಿ, ಹಿಮಪಾತ, ದಟ್ಟ ಮಂಜಿನ ವಾತವರಣದಿಂದ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಷ್ಠ್ರ ರಾಜಧಾನಿಯಲ್ಲಿ ದಟ್ಟ ಮಂಜಿನಿಂದಾಗಿ 760 ವಿಮಾನಗಳ ಆಗಮನ ವಿಳಂಬವಾಗಿದ್ದು, 19 ವಿಮಾನಗಳ ಸಂಚಾರ ರದ್ದುಪಡಿಸಲಾಗಿದೆ. 100ಕ್ಕೂ ಹೆಚ್ಚು ರೈಲುಗಳು ಸಂಚಾರ ಸಹ ಏರುಪೇರಾಗಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶಗಳಲ್ಲಿ
ವ್ಯಾಪಕ ಹಿಮಪಾತವಾಗುತ್ತಿದೆ. ಎನ್ಸಿಆರ್ ಪ್ರದೇಶದಲ್ಲಿ ಕನಿಷ್ಠ ತಾಪಮಾನ 6.4 ಡಿಗ್ರಿ ಸೆಲ್ಷಿಯಸ್ಗೆ
ಇಳಿದಿದೆ. ಶನಿವಾರ ಕೂಡಾ ತೀವ್ರ ಚಳಿ ಪರಿಸ್ಥಿತಿ
ಮುಂದುವರಿಯಲಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ
ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶದ ಕಿಲಾಂಗ್ ನಲ್ಲಿ ಕನಿಷ್ಠ ತಾಪಮಾನ ಮೈನಸ್
6 ಡಿಗ್ರಿ ತಲುಪಿದೆ. ಪ್ರಸಿದ್ದ ಪ್ರವಾಸಿ ತಾಣ ಮನಾಲಿಯಲ್ಲಿ 2 ಡಿಗ್ರಿಗೆ ಇಳಿದಿದೆಪ್ರತಿಕೂಲ ಹವಾಮಾನ
ಕಾರಣ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ
ವಾಹನ ಸಂಚಾರ ರದ್ದುಪಡಿಸಲಾಗಿದೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 