ವೈದ್ಯರಿಂದ ಉಚಿತ ಟೆಲಿ ಕನ್ಸಲ್ಟೇಷನ್ಗೆ ಡಾ. ಅಶ್ವತ್ಥನಾರಾಯಣ ನಾಳೆ ಚಾಲನೆ
ಬೆಂಗಳೂರು, ಮಾ.31 ,ಕೊವಿಡ್-19 ಸಂಬಂಧಿತ ಮಾಹಿತಿ ಪಡೆಯಲು ಮತ್ತು ಸಂದೇಹಗಳನ್ನು ಬಗೆಹರಿಸಿಕೊಳ್ಳಲು ಜನರೇ ನೇರವಾಗಿ ವೈದ್ಯರೊಂದಿಗೆ ದೂರವಾಣಿ ಮೂಲಕ ಸಂವಹನ ನಡೆಸಲು ಅನುಕೂಲವಾಗುವ 'ಟೆಲಿ ಕನ್ಸಲ್ಟೇಷನ್' ಯೋಜನೆಗೆ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಬುಧವಾರ ಚಾಲನೆ ನೀಡಲಿದ್ದಾರೆ. ಪ್ರಾಯೋಗಿಕವಾಗಿ ಉಪಮುಖ್ಯಮಂತ್ರಿಯವರ ಸ್ವಕ್ಷೇತ್ರ ಮಲ್ಲೇಶ್ವರದಲ್ಲಿ ಈ ಯೋಜನೆ ಜಾರಿಯಾಗಲಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಯೋಜನೆಯನ್ನು ವಿಸ್ತರಿಸುವ ಉದ್ದೇಶವಿದೆ.'ಟೆಲಿ ಮೆಡಿಸನ್' ಅಂದರೆ ದೂರವಾಣಿ ಮೂಲಕ ವೈದ್ಯರ ನಡುವೆ ಪರಸ್ಪರ ಮಾಹಿತಿ ವಿನಮಯಕ್ಕೆ ನಮ್ಮ ಕಾನೂನಿನಲ್ಲಿ ಅವಕಾಶ ಇದೆ. ಆದರೆ, ವೈದ್ಯರ ಜತೆ ಜನ ಸಾಮಾನ್ಯರು ದೂರವಾಣಿ ಸಮಾಲೋಚನೆ ನಡೆಸಲು ಅವಕಾಶ ಇರಲಿಲ್ಲ. ಈ ಸಂಬಂಧ ಕಾನೂನು ತಿದ್ದುಪಡಿ ತಂದು ಆದೇಶ ಹೊರಡಿಸಲಾಗಿದ್ದು, ವೈದ್ಯರ ಜತೆ ಜನರೇ ನೇರವಾಗಿ ಮಾತನಾಡಲು ಅವಕಾಶ ಕಲ್ಪಿಸಲಾಗಿದೆ. ಕೊವಿಡ್ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಜನ ಈ 'ಟೆಲಿ ಕನ್ಸಲ್ಟೇಷನ್'ನ ಪ್ರಯೋಜನ ಪಡೆಯಬಹುದಾಗಿದೆ.
ನಿರ್ವಹಣೆ ಹೇಗೆ?ಕೊರೊನಾ ಸೋಂಕಿನ ಲಕ್ಷಣಗಳು, ಸಂಬಂಧಿತ ಆರೋಗ್ಯ ಸಮಸ್ಯೆಗಳು ಹಾಗೂ ಈ ಕುರಿತ ಯಾವುದೇ ಸಂದೇಹಗಳನ್ನು ಪರಿಹರಿಸಿಕೊಳ್ಳಲು ಸಾರ್ವಜನಿಕರು ನುರಿತ ವೈದ್ಯರ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಬಹುದು. ಈ ವೇಳೆ ರೋಗ ಲಕ್ಷಣಗಳನ್ನು ಬರೆದುಕೊಳ್ಳುವ ವೈದ್ಯರು ಸೂಕ್ತ ಸಲಹೆ ಸೂಚನೆಗಳನ್ನು ನೀಡವರು. ಅಗತ್ಯ ಇದ್ದಲ್ಲಿ ಕರೆಯನ್ನು ತಜ್ಞ ವೈದ್ಯರಿಗೆ ವರ್ಗಾಯಿಸಿ ಹೆಚ್ಚಿನ ಮಾಹಿತಿಯನ್ನೂ ಒದಗಿಸಲಿದ್ದಾರೆ. ಪೋರ್ಟಿಯಾ ಮೆಡಿಕಲ್ ಸಂಸ್ಥೆ ಈ ಸೇವೆ ಒದಗಿಸುತ್ತಿದ್ದು, ವೈದ್ಯರ ತಂಡ ಬೆಳಗ್ಗೆ 8 ರಿಂದ ರಾತ್ರಿ 8ರವರೆಗೆ ಸಾರ್ವಜನಿಕರಿಂದ ಕರೆ ಸ್ವೀಕರಿಸಿ ಸೂಕ್ತ ಮಾರ್ಗದರ್ಶನ ನೀಡಲಿದೆ. ಜತೆಗೆ, ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿಂದಲೂ ವೈದ್ಯರ ಸಲಹೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ದೂರವಾಣಿ ಸಂಖ್ಯೆ: 08066744788
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 