ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ Drug Free India Campaign Program

ಹುಬ್ಬಳ್ಳಿ ಆ.13: ಇಂದು ನಗರದ ಲ್ಯಾಮಿಂಗ್ಟನ್ ಬಾಲಕಿಯರ ಪ್ರೌಢಶಾಲೆಯಲ್ಲಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  

ಬಿಐಇಆರ್‌ಟಿ ಕೆ.ಎಂ.ಗದಗೇರಿ ಮಾತನಾಡಿ, ಭಾರತ ದೇಶದಲ್ಲಿ ಹೆಚ್ಚಾಗಿ ಯುವಕರು ಇದ್ದಾರೆ. ಇಂದು ಯುವಕರು ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಮಾದಕ ವಸ್ತುಗಳನ್ನು ಬಳಸದಂತೆ ಯುವಕರಿಗೆ ತಿಳಿ ಹೇಳಬೇಕಿದೆ. ಆ ನಿಟ್ಟಿನಲ್ಲಿ ಇಂದು ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಸದೃಢ ದೇಶ ಕಟ್ಟಲು ಯುವಕರ ಕೊಡುಗೆ ಅವಶ್ಯವಾಗಿದೆ ಎಂದರು.  

ಈ ಸಂದರ್ಭದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಪ್ರಮಾಣ ವಚನವನ್ನು ವಿದ್ಯಾರ್ಥಿಗಳು ಸ್ವೀಕರಿಸಿದರು.  

ಕಾರ್ಯಕ್ರಮದಲ್ಲಿ ಎಂ.ಆರ್‌.ಡಬ್ಲೂ ಮಾಂತೇಶ ಕುರ್ತಕೋಟಿ, ಮುಖ್ಯೋಪಾಧ್ಯಾಯನಿ ಸುಮಂಗಲಾ ಶೇಟ, ಕೆ.ಪಿ.ಪುಲಾನೇಕರ, ಸುಜಾತ ಅಗಡಿ, ವಿ.ಎಸ್‌.ಕರ್ಲವಾಡ, ಶಾಲೆಯ ಸಿಬ್ಬಂದಿ, ವಿದ್ಯಾರ್ಥಿಗಳು ಇತರರು ಭಾಗವಹಿಸಿದ್ದರು.